ಗುಂಜಾವತಿ ಬಳಿ ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ, ಬೈಕ್ ಸವಾರ ಗಂಭೀರ..! ರಸ್ತೆಯಲ್ಲೇ ಬಿದ್ದು ಒದ್ದಾಡಿದ ಗಾಯಾಳು..!


ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಗುಂಜಾವತಿ ಮೈನಳ್ಳಿ ಬಳಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ಕಾರ್ ಹಾಗೂ ಬೈಕ್ ನಡುವೆ ಸಂಭವಿಸಿದ ದುರಂತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ.

ಗಂಗಾರಾಮ ರಾಮು ಎಡಗೆ (20) ಗಂಭೀರ ಗಾಯಗೊಂಡ ಬೈಕ್ ಸವಾರನಾಗಿದ್ದು. ಮುಂಡಗೋಡ ಕಡೆಯಿಂದ ಯಲ್ಲಾಪುರ ಕಡೆಗೆ ಹೊರಟಿದ್ದ KA-03 MV-6816 ನೋಂದಣಿ ಸಂಖ್ಯೆಯ ಕಾರ್ ಹಾಗೂ ಗುಂಜಾವತಿ ಸಮೀಪದ ಬೆಂಡಿಕಟ್ಟಾ ಕಡೆಯಿಂದ ಗದ್ದೆಗೆ ಹೊರಟಿದ್ದ ಬೈಕ್ ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರ್ ನಲ್ಲಿನ ಏರ್ ಬ್ಯಾಗ್ ಓಪನ್ ಆಗಿದ್ದು ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ.

ಇನ್ನು ಘಟನೆ ನಡೆದು ಒಂದು ಗಂಟೆ ಕಳೆಯುತ್ತ ಬಂದರೂ ಗಾಯಾಳು ಬೈಕ್ ಸವಾರನನ್ನು ಆಸ್ಪತ್ರೆಗೆ ಸಾಗಿಸಿರಲಿಲ್ಲ. ಆ ನಂತರದಲ್ಲಿ, 108 ಅಂಬ್ಯುಲೆನ್ಸ್ ಗೆ ಸ್ಥಳೀಯರು ಕರೆ‌ಮಾಡಿದ ನಂತರ ಸ್ಥಳಕ್ಕೆ ಆಗಮಿಸಿದ 108 ಅಂಬ್ಯುಲೆನ್ಸ್ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದೆ.

ಹೀಗಾಗಿ, ಗಾಯಾಳು ನೋವಿನಿಂದ ನರಳುತ್ತಿದ್ದ ದೃಷ್ಯ ಕಂಡು ಬಂತು. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

error: Content is protected !!