ಇಂದೂರಿನ ಜನಪದ ಕಲಾವಿದ ಸಹದೇವಪ್ಪ ನಡಗೇರಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ

ಮುಂಡಗೋಡ ತಾಲೂಕಿನ ಇಂದೂರಿನ ಜನಪದ ಕಲಾವಿದ ಸಹದೇವಪ್ಪ ನಡಗೇರಿಯವರಿಗೆ ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ‌ ಮಾಡಿ ರಾಜ್ಯ ಸರ್ಕಾರ ಇಂದು ಘೋಷಣೆ ಮಾಡಿದೆ.

ಅಂದಹಾಗೆ, ಸಹದೇವಪ್ಪ ನಡಗೇರಿಯವರು ತಾಲೂಕಿನ ಹಿರಿಯ ಜನಪದ ಕಲಾವಿದರಾಗಿದ್ದು, ವಿಶೇಷ ಶೈಲಿಯ ಜನಪದ ಗೀತೆಗಳನ್ನು ಹಾಡುತ್ತ ಜನಮನ ಗೆದ್ದಿದ್ದಾರೆ. ಸದ್ಯ ಮುಂಡಗೋಡ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ ಆಗಿ ಸೇವೆ ಸಲ್ಲಿಸ್ತಿರೋ ನಡಗೇರಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ತಾಲೂಕಿನ ಜನರ ಹರ್ಷಕ್ಕೆ ಕಾರಣವಾಗಿದೆ.

ಪಬ್ಲಿಕ್ ಫಸ್ಟ್ ನ್ಯೂಸ್ ಪರವಾಗಿ ಸಾಧಕ ಸಹದೇವಪ್ಪ ನಡಗೇರಿಯವರಿಗೆ ಅಭಿನಂದನೆಗಳು

error: Content is protected !!