ಉತ್ತರ ಕನ್ನಡ ಎಸ್ಪಿ ಸುಮನಾ ಪೆನ್ನೇಕರ್ ಎತ್ತಂಗಡಿ, ವರ್ಗಾವಣೆಗೊಳಿಸಿ ಸರ್ಕಾರ ಆದೇಶ..!

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ.ಸುಮನಾ ಪೆನ್ನೇಕರ್ ಎತ್ತಂಗಡಿಯಾಗಿದ್ದಾರೆ. ಒಂದೇ ಒಂದು ವರ್ಷದ ಅವದಿಯಲ್ಲೇ ಉತ್ತರ ಕನ್ನಡ ಜಿಲ್ಲೆಯಿಂದ ಎಸ್ಪಿ‌ ಮೇಡಂ ವರ್ಗಾವಣೆ ಮಾಡಿದ್ದು ಜಿಲ್ಲೆಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಎಸ್ಪಿ ಡಾ.ಸುಮನ್ ಡಿ.ಫೆನ್ನೇಕರ್

ಅಂದಹಾಗೆ, ಪಬ್ಲಿಕ್ ಫಸ್ಟ್ ನ್ಯೂಸ್ ಕಳೆದ ಒ‌ಂದು ತಿಂಗಳ ಹಿಂದೆಯೇ ‌ನುಡಿದಿದ್ದ ಭವಿಷ್ಯ ನಿಜವಾಗಿದ್ದು, ಉತ್ತರ ಕನ್ನಡಕ್ಕೆ ನೂತನ ಎಸ್ಪಿಯಾಗಿ ಎನ್. ವಿಷ್ಣುವರ್ಧನ್ ವರ್ಗಾವಣೆಗೊಂಡಿದ್ದಾರೆ.

ನೂತನ ಎಸ್ಪಿ ಎನ್.ವಿಷ್ಣುವರ್ಧನ್

ಡಾ ಸುಮನಾ ಪೆನ್ನೇಕರ್ ಮೇಡಂ ಜಿಲ್ಲೆಗೆ ಎಂಟ್ರಿಯಾಗಿ ಬಂದಾಗಿನಿಂದ ಇಲ್ಲಿ‌ನ ಅಕ್ರಮಿಗಳು ಬಾಲ ಬಿಚ್ಚಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಅದೇಷ್ಟೋ ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿತ್ತು. ಹೀಗಾಗಿ, ಕೆಲವು ರಾಜಕಾರಣಿಗಳೂ ಸೇರಿದಂತೆ ಅಕ್ರಮಿಗಳು, ಎಸ್ಪಿ ವರ್ಗಾವಣೆಗೆ ಪಟ್ಟು ಹಿಡಿದು ಬೆಂಗಳೂರಿಗೆ ಅಲೆದಿದ್ದರು. ಅದ್ರಂತೆ, ಸರ್ಕಾರ ಇಂದು ಎಸ್ಪಿ ಡಾ. ಸುಮನಾ ಪೆನ್ನೇಕರ್ ರವರನ್ನ ತಕ್ಷಣದಿಂದಲೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ವರ್ಗಾವಣೆ ಆದೇಶ
error: Content is protected !!