ಇಂದೂರು ಬಳಿ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತ, ನೆಲ್ಲಿಹರವಿ ತಾಂಡಾದ ದಂಪತಿಗೆ ಗಾಯ

ಮುಂಡಗೋಡ ತಾಲೂಕಿನ ಇಂದೂರು ಬಳಿಯ ಷರೀಫ ದೇವಸ್ಥಾನದ ಬಳಿ ಅಪಘಾತವಾಗಿದೆ. ಟ್ರಾಕ್ಟರ್ ಹಾಗೂ ಬೈಕ್‌ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಮೇಲಿದ್ದ ದಂಪತಿಗೆ ಗಾಯವಾಗಿದೆ.

ಕಲಘಟಗಿ ತಾಲೂಕಿನ ನೆಲ್ಲಿಹರವಿ ತಾಂಡಾದ
ಆಕಾಶ್ ವಾಸಪ್ಪ ಲಮಾಣಿ (22) ಸಂಗೀತಾ ಆಕಾಶ್ ಲಮಾಣಿ (20) ಗಾಯಗೊಂಡವರಾಗಿದ್ದಾರೆ. ಇಂದೂರು ಕಡೆಯಿಂದ ಬರುತ್ತಿದ್ದ ಬೈಕ್ ಹಾಗೂ ಮುಂಡಗೋಡ ಕಡೆಯಿಂದ ಬರುತ್ತಿದ್ದ ಟ್ರಾಕ್ಟರ್ ನಡುವೆ ಡಿಕ್ಕಿಯಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸದ್ಯ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ‌. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!