ಕುಮಟಾ: ತಾಲೂಕಿನ ಅಘನಾಶಿನಿ ನದಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ದೋಳಿ ಮುಳುಗಡೆಯಾಗಿ ಮೀನುಗಾರ ಸಾವು ಕಂಡಿದ್ದಾನೆ.

ಕುಮಟಾದ ಲುಕ್ಕೇರಿ ನಿವಾಸಿಯಾಗಿದ್ದ
ವಿಘ್ನೇಶ್ವರ ಅಂಬಿಗ (24) ಮೃತ ದುರ್ದೈವಿಯಾಗಿದ್ದಾನೆ. ಮೀನುಗಾರಿಕೆಗೆ ತೆರಳಿದ್ದ ವೇಳೆ ಒಳನೀರಿನ ಹರಿವಿನಿಂದ ದೋಣಿ ಮುಳುಗಿದೆ. ಹೀಗಾಗಿ, ನೀರಲ್ಲಿ ಮುಳುಗಿ ತೀವ್ರ ಅಸ್ವಸ್ಥನಾಗಿದ್ದ ವಿಘ್ನೇಶ್ವರ ಆಸ್ಪತ್ರೆಗೆ ಸಾಗಿಸುವ ಸಾವು ಕಂಡಿದ್ದಾನೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!