ಛತ್ರಪತಿ ಶಿವಾಜಿ ಮಹಾರಾಜರು ಇಡೀ ಹಿಂದೂ ಕುಲದವರ ಆದರ್ಶ-ಸಚಿವ ಹೆಬ್ಬಾರ್

ಮುಂಡಗೋಡ: ಶಿವಾಜಿ ಮಹಾರಾಜರು ಒಂದು ಜಾತಿಗೆ ಸೀಮಿತರಾದವರಲ್ಲ, ಸಕಲ ಹಿಂದೂ ಧರ್ಮದ ಜನರ ಆರಾಧಕರು, ಅವರ ಆದರ್ಶಗಳನ್ನ ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು, ತಾಯಂದಿರು ತಮ್ಮ ಮಕ್ಕಳಿಗೆ ಶಿವಾಜಿ ಮಹಾರಾಜರ ಆದರ್ಶಗಳನ್ನ ತಿಳಿಸಿ ಶಿವಾಜಿ ಮಹಾರಾಜರಂತೆ ಬೆಳೆಸಬೇಕು ಅಂತಾ ಸಚಿವ ಶಿವರಾಮ್ ಹೆಬ್ಬಾರ್ ಕರೆ ನೀಡಿದ್ರು‌.

ಅವರು ತಾಲೂಕಿನ ಚಿಗಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಣೇಶಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶಿವಾಜಿ ಮಹಾರಾಜರ ಪುತ್ತಳಿಯನ್ನ ಅನಾವರಣಗೊಳಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಶುಭದಿನದಂದು ಶಿವಾಜಿ ಮಹಾರಾಜರ ಪುತ್ತಳಿಯನ್ನ ಅನಾವರಣಗೊಳಿಸಿರುವುದು ಬಹಳ ಪುಣ್ಯದ ಕೆಲಸ ಅಂತ ಸಚಿವ್ರು ಹೆಮ್ಮೆ ವ್ಯಕ್ತ ಪಡಿಸಿದ್ರು.

ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯ, ಎಲ್.ಟಿ.ಪಾಟೀಲ್, ರವಿಗೌಡ ಪಾಟೀಲ್, ತಾಲೂಕಾ ಮರಾಠ ಸಮುದಾಯದ ಅಧ್ಯಕ್ಷ ಡಿ.ಎಫ್.ಮಡ್ಲಿ, ಪ್ರಮುಖರಾದ ಗುಡ್ಡಪ್ಪ ಕಾತೂರ, ಗ್ರಾಮ ಪಂಚಾಯತ ಸದಸ್ಯ ಮಂಜುನಾಥ ಹೋತ್ನಳ್ಳಿ, ಸಿದ್ದು ಹಡಪದ ಎಮ್.ಪಿ.ಕುಸೂರ, ಪಕ್ಕಿರೇಶ ಓಲಿ, ಪರಶುರಾಮ ತಹಶಿಲ್ದಾರ್, ಶಿವಪುತ್ರಪ್ಪ ಹಾನಗಲ್, ವೈ.ಪಿ.ಭುಜಂಗಿ ಸೇರಿದಂತೆ ಸ್ಥಳೀಯ ಪ್ರಮುಖರು, ಗ್ರಾಮಸ್ಥರು ಉಪಸ್ಥಿತರಿದ್ದರು.

error: Content is protected !!