ಮುಂಡಗೋಡ ಟಿಬೇಟಿಯನ್ ಕ್ಯಾಂಪ್ ನಂ.1 ರಲ್ಲಿ ಜೇನು ದಾಳಿಯಾಗಿದೆ. ದಲಿತ ಸಂಘರ್ಷ ಸಮಿತಿಯ ಕಾರ್ಯಕ್ರಮಕ್ಕೆ ಬಂದಿದ್ದವರ ಮೇಲೆ ಜೇನುನೋಣಗಳ ದಾಳಿಯಾಗಿದೆ. ಪರಿಣಾಮ ಸುಮಾರು 100 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ ಅನ್ನೊ ಮಾಹಿತಿ ಲಭ್ಯವಾಗಿದೆ.

ಅದಹಾಗೆ, ಇಂದು ತಾಲೂಕಿನ ಟಿಬೇಟಿಯನ್ ಕಾಲೋನಿ ನಂಬರ್ 1 ರಲ್ಲಿ ದಲಿತ ಸಂಘಟನೆಗಳ ನೇತೃತ್ವದಲ್ಲಿ ಅಹಿಂದ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುಮಾರು 300 ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿದ್ರು. ಈ ವೇಳೆ ಅದು ಹೇಗೋ ಗೊತ್ತಿಲ್ಲ, ಜೇನು ನೋಣಗಳು ದಾಳಿಮಾಡಿವೆ ಎನ್ನಲಾಗಿದೆ. ಪರಿಣಾಮ 100 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ ಎನ್ನಲಾಗಿದೆ.

ಸದ್ಯ ಗಾಯಾಳುಗಳನ್ನು 108 ಅಂಬ್ಯುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. 108 ಅಂಬ್ಯುಲೆನ್ಸ್ ಸಿಬ್ಬಂದಿ ಧನರಾಜ್ ಹಾಗೂ ಚಾಲಕ ಪ್ರಕಾಶ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ರವಾನಿಸಿದ್ದಾರೆ.

error: Content is protected !!