ಶಂಕ್ರಯ್ಯ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾನೆ, ದಯವಿಟ್ಟು ತಪ್ಪು ಮಾಹಿತಿಯ ಸ್ಟೇಟಸ್ ಬೇಡ ಗೆಳೆಯರೆ, ಎಲ್ಲರೂ ಆತನಿಗಾಗಿ ಪ್ರಾರ್ಥಿಸೋಣ..!

ಮುಂಡಗೋಡಿನ ಪಾಳಾ ಸಮೀಪ ನಡೆದ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರೋ ಯುವಕ ಶಂಕರಯ್ಯನ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಆದ್ರೆ, ಇನ್ನೇನೂ ಬೇರೆಯ ರೀತಿಯ ಅನಾಹುತ ಸಂಭವಿಸಿಲ್ಲ. ತಜ್ಞ ವೈದ್ಯರು ನಿರಂತರವಾಗಿ ಶಂಕರಯ್ಯನಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಅಂತಾ ಕಿಮ್ಸ್ ನ ವೈದ್ಯರಿಂದ ಮಾಹಿತಿ ಲಭ್ಯವಾಗಿದೆ. ಆತ ಬದುಕಿದ್ದಾನೆ. ಹೀಗಾಗಿ, ತಪ್ಪು ಮಾಹಿತಿ ಹರಡಬೇಡಿ ಅಂತಾ ಕುಟುಂಬಸ್ಥರು ಮನವಿ ಮಾಡಿದ್ದಾರೆ..

 

 

ಬದುಕಿ ಬಾ ತಮ್ಮಾ..!
ಅಷ್ಟಕ್ಕೂ, ನಿನ್ನೆ ನಡೆದ ಭೀಕರ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿರೋ ಶಂಕ್ರಯ್ಯ ಮಲ್ಲಯ್ಯ ಹಿರೇಮಠ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆತುತ್ತಿದ್ದಾನೆ. ಈ ಹೊತ್ತಲ್ಲಿ, ಮುಂಡಗೋಡಿಗರು ಆತ ಬದುಕಿ ಬರಲಿ ಅಂತಾ ದೇವರಲ್ಲಿ ಪ್ರಾರ್ಥಿಸೋಣ. ಅದನ್ನು ಬಿಟ್ಟು, ಖಚಿತ ಮಾಹಿತಿ ಪಡೆಯದೇ ದಯವಿಟ್ಟು ವಾಟ್ಸಾಪ್ ಸ್ಟೇಟಸ್ ಗಳಲ್ಲಿ ತಪ್ಪು ತಪ್ಪಾದ ಸಂದೇಶ ರವಾನಿಸಬೇಡಿ ಗೆಳೆಯರೆ, ಯಾಕಂದ್ರೆ ಆ ನೋವನ್ನು ಸಹಿಸಿಕೊಳ್ಳಲು ಆತನ ಹಡೆದವ್ವಗೆ ಖಂಡಿತ ಸಾಧ್ಯವಿಲ್ಲ. ಆ ಹಡೆದ ಕರುಳು ಮಗನಿಗಾಗಿ, ಮಗನ ಬದುಕಿಗಾಗಿ ಹಂಬಲಿಸಿರತ್ತೆ, ವೈದ್ಯರೂ ಕೂಡ ಪ್ರಯತ್ನ ನಡೆಸಿದ್ದಾರೆ. ಹೀಗಿದ್ದಾಗ ನಾವು ಆತ ಬದುಕಿ ಬರಲೆಂದು ಹಾರೈಸೋಣ, ಪ್ರಾರ್ಥಿಸೋಣ..

ಬದುಕಿ ಬಾ ತಮ್ಮಾ
error: Content is protected !!