ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದ ಸುಮಾರು ಹತ್ತಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರಿದ್ದಾರೆ. ಯಲ್ಲಾಪುರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಹಿರಿಯ ಮುಖಂಡ ಎಲ್.ಟಿ. ಪಾಟೀಲ್ ಸೇರಿದಂತೆ ಸಿದ್ದಪ್ಪ ಹಡಪದ್, ವಿವೇಕ್ ಹೆಬ್ಬಾರ್ ಕಾರ್ಯಕರ್ತರಿಗೆ ಬಿಜೆಪಿ ಶಾಲು ಹಾಕಿ ಬರಮಾಡಿಕೊಂಡರು.

ಅಗಡಿ ಗ್ರಾಮದ ಕಾಂಗ್ರೆಸ್ ಮುಖಂಡ ಎಚ್.ಎಂ.ನಾಯ್ಕ್ ರ ಸಹೋದರ ಸುನೀಲ್ ನಾಯ್ಕ್ ಸೇರಿದಂತೆ ಸುಮಾರು ಹತ್ತು ಜನ ಕಾರ್ಯಕರ್ತರು ಬಿಜೆಪಿ ಸೇರಿದ್ದಾರೆ‌. ಇನ್ನು ಸಂಜು ನಾಯ್ಕ್, ಪ್ರಸನ್ನ ನಾಯ್ಕ್, ಮಾರುತಿ ವಾಲ್ಮೀಕಿ, ಶೇಖಪ್ಪ ಗಳಗಿ, ಗದಗಯ್ಯ ಹಿರೇಮಠ, ಕಲ್ಲಪ್ಪ ವಾಲ್ಮೀಕಿ, ಚನ್ನಪ್ಪ ಜಿನ್ನೂರ, ಮುತ್ತು ಕುಮ್ಮಣ್ಣಿ, ಸುಪುತ್ರಪ್ಪ ವಾಲ್ಮೀಕಿ ಬಿಜೆಪಿ ಸೇರಿದ್ದಾರೆ.

error: Content is protected !!