ಮುಂಡಗೋಡ ತಾಲೂಕಿನ ಹಿರಿಯ ಕಾಂಗ್ರೆಸ್‌ ಮುಖಂಡ ಪಿ.ಜಿ. ತಂಗಚ್ಚನ್ ನೇತೃತ್ವದಲ್ಲಿ ಹಲವು ಕಾಂಗ್ರೆಸ್‌ ಕಾರ್ಯಕರ್ತರು ಇಂದು ಬಿಜೆಪಿ ಸೇರ್ಪಡೆಯಾದರು.

ಸಚಿವ ಶಿವರಾಮ ಹೆಬ್ಬಾರ್‌, ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತಂಗಚ್ಚನ್ ಅವರು, ಕಾಂಗ್ರೆಸ್‌ನಲ್ಲಿ ಮೂಲ ಕಾಂಗ್ರೆಸ್ ಕಾರ್ಯಕರ್ತರನ್ನು ಹಾಗೂ ಹಿರಿಯರನ್ನು ಕಡೆಗಣಿಸಿ ಅಗೌರವದಿಂದ ಕಾಣಲಾಗುತ್ತಿದೆ. ಆದ್ದರಿಂದ ಇಂದು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿ ಶಿವರಾಮ ಹೆಬ್ಬಾರ್‌ ಅವರ ಗೆಲುವಿಗಾಗಿ ಶ್ರಮಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಲ್‌ ಟಿ ಪಾಟೀಲ್‌, ಯುವ ನಾಯಕ ವಿವೇಕ್‌ ಹೆಬ್ಬಾರ್‌, ಮಹಿಳಾ ಮೋರ್ಚಾ ಅಧ್ಯಕ್ಷೆ ಲಿಸಾ ಥಾಮಸ್‌, ಪ್ರಮುಖರಾದ ರಾಮು ಲಮಾಣಿ ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

error: Content is protected !!