ಕೊಪ್ಪ ಇಂದಿರಾನಗರ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಕೋಡಂಬಿಯ ವ್ಯಕ್ತಿಗೆ ಗಾಯ, ಆಸ್ಪತ್ರೆಗೆ ದಾಖಲು..!

ಮುಂಡಗೋಡ ತಾಲೂಕಿನ ಕೊಪ್ಪ ಇಂದಿರಾನಗರದ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರನಿಗೆ ಗಾಯವಾಗಿದೆ. ಸದ್ಯ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ.

ಗಾಯಗೊಂಡಿರೋ ಬೈಕ್ ಸವಾರ, ಕೋಡಂಬಿ ಗ್ರಾಮದ ರಾಘವೇಂದ್ರ ಬಾಬು ಅರ್ಕಸಾಲಿ ಅಂತಾ ಗುರುತಿಸಲಾಗಿದೆ. ಈತ ಸಂಜೆ ತನ್ನ ಬೈಕ್‌ಮೂಲಕ ಇಂದಿರಾನಗರದ ಬಳಿ ಹೊರಟಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದು ದುರ್ಘಟನೆ ನಡೆದಿದೆ. ನಂತರ ಮಾಹಿತಿ ತಿಳಿದು 108 ಅಂಬ್ಯುಲೆನ್ಸ್ ಸ್ಥಳಕ್ಕೆ ಧಾವಿಸಿ 108 ಅಂಬ್ಯಲೆನ್ಸ್ ಸಿಬ್ಬಂದಿಗಳು ಸವಾರನಿಗೆ ಪ್ರಥಮ ಚಿಕಿತ್ಸೆ ಕೊಟ್ಟು ಮುಂಡಗೋಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನು ಗಾಯಗೊಂಡಿರೋ ಬೈಕ್ ಸವಾರನ‌ ಬಳಿ ಒಂದು ಪರ್ಸ್, ಮೊಬೈಲ್, ಹಣ ಆಧಾರ ಕಾರ್ಡ್, ಪಾನ್ ಕಾರ್ಡ್, ಎ ಟಿ ಎಮ್ ಕಾರ್ಡ್ ದೊರೆತಿದ್ದು, 108 ಅಂಬ್ಯುಲೆನ್ಸ್ ಸಿಬ್ಬಂದಿಗಳು ಪೊಲೀಸ್ ಸಿಬ್ಬಂದಿಗೆ ಹಸ್ತಾಂತರಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!