ಕಲಘಟಗಿ: ಬಂಗಾರದ ಆಸೆಗಾಗಿ ವೃದ್ಧ ಮಹಿಳೆಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿದ್ದಾರೆ ಆಗಂತುಕರು. ಕಲಘಟಗಿ ತಾಲೂಕಿನ ಆಲದಕಟ್ಟಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ, ನೆಲ್ಲಿಹರವಿ ಗ್ರಾಮದ ಮುದುಕಿಯನ್ನು ಕೊಂದು ಹಾಕಿದ್ದಾರೆ.

ಕಲಘಟಗಿ ತಾಲ್ಲೂಕಿನ ನೆಲ್ಲಿಹರವಿ ಗ್ರಾಮದ 82 ವರ್ಷದ ತಿಪ್ಪವ್ವ ತಂಬೂರ್ ಎಂಬ ವೃದ್ದೆಯನ್ನ ಆಲದಕಟ್ಟಿ ಗ್ರಾಮದ ದ್ಯಾಮಣ್ಣ ಎಂಬುವವರಿಗೆ ಸೇರಿದ ಕಬ್ಬು ಬೆಳೆದ ಜಮೀನಿನಲ್ಲಿ ಭೀಕರವಾಗಿ ಕೊಲೆ ಮಾಡಿ, ವೃದ್ದೆಯ ಕೊರಳಲಿದ್ದ ಚಿನ್ನಾಭರಣ ದೋಚಿಕೊಂಡು ಕೊಲೆಗಾರರರು ಪರಾರಿ ಆಗಿದ್ದಾರೆ.

ನಿನ್ನೆ ತಡ ರಾತ್ರಿ ಆಲದಕಟ್ಟಿ ಗ್ರಾಮದ ಗ್ರಾಮಸ್ಥರೊಬ್ಬರು ರಕ್ತದ ಮಡುವಿನಲ್ಲಿ ಕೊಲೆಯಾಗಿ ಬಿದ್ದಿದ್ದ ತಿಪ್ಪವ್ವಳ ಮೃತ ದೇಹವನ್ನ ನೋಡಿ ಕಲಘಟಗಿ ಪೊಲೀಸರಿಗೆ ಮಾಹಿತಿ ರವಾನೆ ಮಾಡಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಕಲಘಟಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಷ್ಟೇ ಅಲ್ಲದೆ ಸ್ಥಳಕ್ಕೆ ಶ್ವಾನದಳವನ್ನ ತರಿಸಿ ಕೊಲೆಗಾರರ ಪತ್ತೆಗೆ ಕೂಡ ಮುಂದಾಗಿದ್ದಾರೆ. ಸದ್ಯ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣವನ್ನು ದಾಖಲು ಮಾಡಿಕೊಂಡು ಕೊಲೆಗಾರರ ಪತ್ತೆಗೆ ಜಾಲ ಬೀಸಿದ್ದಾರೆ.

error: Content is protected !!