ಲಾರಿ- ಕಾರು ನಡುವೆ ಭೀಕರ ಅಪಘಾತ, ಎರಡು ಮಕ್ಕಳೂ ಸೇರಿ 6 ಜನ ಸ್ಥಳದಲ್ಲೇ ಸಾವು..!

ಕೊಪ್ಪಳದ ಕುಷ್ಟಗಿ ಬಳಿ ಭೀಕರ ಅಪಘಾತಾಗಿದೆ. ಪರಿಣಾಮ ಸ್ಥಳದಲ್ಲೇ 6 ಜನ ಸಾವು ಕಂಡಿದ್ದಾರೆ. ಕುಷ್ಟಗಿಯ ಕಲಕೇರಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಇಂಡಿಕಾ ಲಾರಿ ಮಧ್ಯೆ ಅಪಘಾತವಾಗಿದೆ. ಇಂಡಿಕಾ ಕಾರಿನಲ್ಲಿದ್ದ ಇಬ್ಬರು ಮಕ್ಕಳು, ಓರ್ವ ಮಹಿಳೆ ಸೇರಿ 6 ಜನ ಸ್ಥಳದಲ್ಲೇ ಸಾವು ಕಂಡಿದ್ದಾರೆ.

ಮೃತರಿಗೆ ತಲಾ 2 ಲಕ್ಷ ಪರಿಹಾರ..!
ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಸಂಭವಿಸಿದ ಕಾರು-ಲಾರಿ ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

error: Content is protected !!