ಧಾರವಾಡ: ಕುಂದಗೋಳ ತಾಲೂಕಿನ ಹಿರೇಹರಕುಣಿ ದಲಿತರಿಗೆ ಸ್ಮಶಾನ ಭೂಮಿ ನೀಡಲು ಅಗ್ರಹಿಸಿ ಹಿರೇಹರಕುಣಿ ಗ್ರಾಮದ ದಲಿತ ಕುಟುಂಬಳಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಈ ಹಿಂದಿನ ರುದ್ರಭೂಮಿಯಲ್ಲಿ ದಲಿತರಿಗೆ ಅಂತ್ಯಕ್ರಿಯೆ ಮಾಡಲು ಅವಕಾಶ ನೀಡುತ್ತಿಲ್ಲ. ಬೇರೆ ಸಮುದಾಯದ ಮುಖಂಡರು ದಲಿತರ ಅಂತ್ಯಕ್ರಿಯೆ ಕಾರ್ಯಕ್ಕೆ ಅಡ್ಡಿ ಪಡಿಸುತ್ತಿದ್ದಾರೆ. ಇದರಿಂದಾಗಿ ದಲಿತ ಕುಟುಂಬಗಳು ಸ್ಮಶಾನ ಭೂಮಿ ಇಲ್ಲದೆ ಪರದಾಡುವ ಸ್ಥಿತಿ ಇದೆ.
ಈ ಕೂಡಲೇ ರಾಜ್ಯ ಸರ್ಕಾರ ಡಿಸಿಯವರೆಗೆ ಸೂಕ್ತ ನಿರ್ದೇಶನ ನೀಡಿ ದಲಿತರಿಗೆ ಸ್ಮಶಾನ ಭೂಮಿ ನೀಡಬೇಕು ಅಂತಾ ಆಗ್ರಹಿಸಿರೋ ದಲಿತ ಸಮುದಾಯದವರು, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತಿದ್ದಾರೆ.

ಸ್ಮಶಾನ ಭೂಮಿ ಸಿಗದಿದ್ದರೆ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

error: Content is protected !!