ಮುಂಡಗೋಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ವಿಧಿವಶ, ಹಲವರ ಸಂತಾಪ..!

ಮುಂಡಗೋಡ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನರಸಿಂಹ ಪರಮೇಶ್ವರ ಭಟ್ (56) ವಿಧಿವಶರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಾಂಶುಪಾಲರು ತಡರಾತ್ರಿ ನಿಧನರಾಗಿದ್ದಾರೆ ಅಂತಾ ತಿಳಿದು ಬಂದಿದೆ.

ಮೂಲತಃ ಯಲ್ಲಾಪುರ ಪಟ್ಟಣದವರಾಗಿದ್ದ ನರಸಿಂಹ ಪರಮೇಶ್ವರ ಭಟ್, ಕಳೆದ 13 ವರ್ಷಗಳಿಂದ ಶಿರಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಆ ನಂತರದಲ್ಲಿ ಕಳೆದ ಫೆಬ್ರುವರಿಯಲ್ಲಿ ಮುಂಡಗೋಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ವರ್ಗಾವಣೆಗೊಂಡಿದ್ದರು. ಅಲ್ದೇ ಫೆ. 7 ರಂದು ಮುಂಡಗೋಡ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ ನಿಯುಕ್ತಿಗೊಂಡಿದ್ದರು.

ಪ್ರಾಂಶುಪಾಲರ ನಿಧನಕ್ಕೆ ಮುಂಡಗೋಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರು ಸೇರಿದಂತೆ ಸಿಬ್ಬಂದಿ ವರ್ಗ ಸಂತಾಪ ಸೂಚಿಸಿದೆ.

error: Content is protected !!