ನಿರಂತರ ಮಳೆ ಹಿನ್ನೆಲೆ, ಮುಂಡಗೋಡ ತಾಲೂಕು ಸೇರಿ ಜಿಲ್ಲಾಧ್ಯಂತ ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ, ಹಲವು ಅನಾಹುತಗಳಿ ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಮುಂಡಗೋಡ ತಾಲೂಕು ಸೇರಿದಂತೆ ನಾಳೆ ಜುಲೈ 25 ರ ಮಂಗಳವಾರವೂ ಜಿಲ್ಲೆಯ ಅಂಗನವಾಡಿಗಳೂ ಸೇರಿ, ಎಲ್ಲಾ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.

ಹವಾಮಾನ (Meteorological Department) ಆರೆಂಜ್ ಅಲರ್ಟ್ ಮುನ್ಸೂಚನೆ ನೀಡಲಾಗಿದೆ. ಅಲ್ಲದೇ,
ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಯ ಕಾರಣದಿಂದ ಹಳ್ಳಗಳು, ಕಾಲುವೆಗಳು ತುಂಬಿ ಹರಿಯುತ್ತಿವೆ. ಅಲ್ಲದೇ ಕೆಲವು ಕಡೆ ಮನೆಗಳಿಗೆ, ರಸ್ತೆಗಳಿಗೆ ಹಾನಿಯಾಗಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೆಜುಗಳಿಗೆ ರಜೆ ನೀಡಿದ್ದು ಸಾರ್ವಜನಿಕರು ಜಾಗ್ರತೆ ವಹಿಸುವಂತೆ ಎಚ್ಚರಿಕೆ ನೀಡಲಾಗಿದೆ.

error: Content is protected !!