ಮುಂಡಗೋಡ ಪಟ್ಟಣದ ಹಳೂರಿನಲ್ಲಿ ಭಾರೀ ಬೆಂಕಿ ಅನಾಹುತವಾಗಿದೆ‌. ದನದ ಕೊಟ್ಟಿಗೆಗೆ ಬೆಂಕಿ ತಗುಲಿ ಬರೋಬ್ಬರಿ 7 ಆಕಳುಗಳು ಸಜೀವ ದಹನವಾಗಿ ಸುಟ್ಟು ಕರಕಲಾಗಿವೆ. ಆದ್ರೆ, ಬೆಂಕಿ ತಗುಲಿದ್ದು ಹೇಗೆ ಅಂತಾ ಇನ್ನು ಖಚಿತತೆ ಸಿಕ್ಕಿಲ್ಲ.

ಹಳೂರಿನ ಮಂಜುನಾಥ್ ನಾಗೇಶ್ ಶೇಟ್ ಎಂಬುವವರಿಗೆ ಸೇರಿದ, ದನದ ಕೊಟ್ಟಿಗೆಯಲ್ಲಿ ದುರಂತ ಸಂಭವಿಸಿದೆ. ತಡರಾತ್ರಿ ನಡೆದಿರೋ ಘಟನೆಯಲ್ಲಿ ಇಡೀ ದನದ ಕೊಟ್ಟಿಗೆ ಆಕಳುಗಳ ಸಮೇತವಾಗಿಯೇ ಸುಟ್ಟು ಕರಕಲಾಗಿದೆ. ದುರಂತ ಅಂದ್ರೆ ಘಟನೆ ನಡೆದಾಗ ರಾತ್ರಿ ಯಾರಿಗೂ ಗಮನಕ್ಕೆ ಬಂದಿಲ್ಲ, ಬೆಳಿಗ್ಗೆಯಷ್ಟೇ ಘಟನೆ ಬೆಳಕಿಗೆ ಬಂದಿದೆ.

ಈ ಅನಾಹುತದಲ್ಲಿ ಹಾನಿಯಾದ ಅಂದಾಜು ಇನ್ನು ಲಭ್ಯವಾಗಿಲ್ಲ. ಸದ್ಯ ಮುಂಡಗೋಡ ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!