ಶಿಗ್ಗಾವಿ ತಾಲೂಕಿನ ತಿಮ್ಮಾಪುರ ಕ್ರಾಸ್ ಬಳಿ ನಸುಕಿನ ಜಾವ ಭೀಕರ ಅಪಘಾತವಾಗಿದೆ. ಲಾರಿ ಹಾಗೂ ಕಾರು ಮುಖಾಮುಕಿ ಡಿಕ್ಕಿಯಾದ ಪರಿಣಾಮ, ಇನ್ನೇನು ಮದುವೆ ಆಗಬೇಕೆಂಬ ಕನಸು ಹೊತ್ತಿದ್ದ ಜೋಡಿ ಸ್ಥಳದಲ್ಲೇ ದಾರುಣ ಸಾವು ಕಂಡಿದೆ. ಮತ್ತಿಬ್ಬರಿಗೆ ಗಂಭೀರ ಗಾಯವಾಗಿದೆ.

ಮನೋಹರ್ (38), ಪ್ರಿಯಾಂಕಾ(23) ಸಾವನ್ನಪ್ಪಿದ ದುರ್ದೈವಿಗಳು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ತಿಮ್ಮಾಪುರ ಕ್ರಾಸ್ ಬಳಿಯ NH4 ರಲ್ಲಿ ಘಟನೆ ನಡೆದಿದ್ದು, ಬೆಂಗಳೂರಿನಿಂದ ಬಾಂಬೆಗೆ ಹೊರಟಿದ್ದ ಇವರ, ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮೃತರು ಬೆಂಗಳೂರು ಮೂಲದವರು ಎಂದು ಗುರುತಿಸಲಾಗಿದೆ.

ಮೃತ ಮನೋಹರ್ ಅಜಾಗರೂಕತೆಯೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಸದ್ಯದಲ್ಲೆ ಮನೋಹರ್ ಗೂ ಪ್ರಿಯಾಂಕಗೂ ಮದುವೆ ನಿಶ್ಚಯ ಆಗಿತ್ತು. ಸ್ಥಳಕ್ಕೆ ತಡಸ ಪೋಲಿಸರ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.
ತಡಸ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!