ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯ ಇಂದಿರಾನಗರ ಬಳಿ ಕಾರು ಬೈಕ್ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರನಿಗೆ ಗಾಯವಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ಪಾದದ ಮಾಂಸ ಹೊರ ಬಿದ್ದಿದೆ. ಹೀಗಾಗಿ, ಸದ್ಯ ಗಾಯಾಳುವನ್ನು ತಾಲೂಕಾಸ್ಪತ್ರೆಗೆ ಸಾಗಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಕೈಗೊಂಡಿದ್ದಾರೆ.

ಕೊಪ್ಪ (ಇಂದೂರು) ಗ್ರಾಮದ ಬಸವರಾಜ್ ಹಡಪದ ಎಂಬುವವನೇ ಗಾಯಗೊಂಡಿರೋ ಬೈಕ್ ಸವಾರನಾಗಿದ್ದಾನೆ. ಮುಂಡಗೋಡ ಕಡೆಯಿಂದ ಕಲಘಟಗಿ ಕಡೆಗೆ ಹೋಗುತ್ತಿದ್ದ ಕಾರ್, ಬೈಕ್ ಗೆ ಡಿಕ್ಕಿಯಾಗಿದೆ. ಹೀಗಾಗಿ, ಕಾರಿನ ಮುಂಬಾಗ ಕೂಡ ನುಜ್ಜುಗುಜ್ಜಾಗಿದೆ. ಅಲ್ಲದೇ ಬೈಕ್ ಕೂಡ ಡಿಕ್ಕಿಯ ರಭಸಕ್ಕೆ ರಸ್ತೆ ಬದಿಯಲ್ಲಿ ಬಿದ್ದಿದೆ. ಅದೃಷ್ಟವಶಾತ್ ಪ್ರಾಣಾಪಾಯವಾಗಿಲ್ಲ.

ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

************

error: Content is protected !!