ಮುಂಡಗೋಡಿನಿಂದ ನಾಪತ್ತೆಯಾಗಿದ್ದ ವ್ಯಕ್ತಿ ಬಾಚಣಕಿ ಡ್ಯಾಂ ನಲ್ಲಿ ಶವವಾಗಿ ಪತ್ತೆ..!

ಮುಂಡಗೋಡ ಪಟ್ಟಣದ ಕಂಬಾರಗಟ್ಟಿ ಪ್ಲಾಟ್ ನಿಂದ ಕಳೆದ ರವಿವಾರ ಆಗಷ್ಟ 13 ರಂದು ನಾಪತ್ತೆಯಾಗಿದ್ದ ವ್ಯಕ್ತಿ ತಾಲೂಕಿನ ಬಾಚಣಕಿ ಡ್ಯಾಂ ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಇಂದು ಬೆಳಿಗ್ಗೆಯಷ್ಟೇ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದ ಕುಟುಂಬಸ್ಥರು ಹುಡುಕಿ ಕೊಡುವಂತೆ ಮನವಿ ಮಾಡಿದ್ದರು. ಆದ್ರೀಗ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ.

ಕಂಬಾರಗಟ್ಟಿ ಪ್ಲಾಟಿನ ಬಸವರಾಜ್ ಮಲ್ಲಪ್ಪ ಇಳಿಗೇರ್ (49), ಎಂಬುವವನೇ ಶವವಾಗಿ ಪತ್ತೆಯಾಗಿದ್ದು, ಇಂದು ಶವ ಜಲಾಶಯದಲ್ಲಿ ತೇಲಾಡುತ್ತಿರೋದನ್ನು ಕಂಡ ಜನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಸ್ಥಳಕ್ಕೆ ಆಗಮಿಸಿರೋ ಮುಂಡಗೋಡ ಪೊಲೀಸರು ಶವ ಹೊರತೆಗೆದಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ.

error: Content is protected !!