ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನ ಭಯಾನಕ ಮರ್ಡರ್..!

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನನ್ನು ಬರ್ಬರವಾಗಿ ಕೊಚ್ಚಿ ಹಾಕಿದ್ದಾರೆ ದುಷ್ಕರ್ಮಿಗಳು. ಗಾರೆ ಕೆಲಸಕ್ಕೆಂದು ಹುಬ್ಬಳ್ಳಿಗೆ ಹೋಗಿದ್ದ ಮೌಲಾಲಿ ಎಂಬುವ ಯುವಕನ್ನು ಕೊಂದು ಹಾಕಿದ್ದಾರೆ.

ಹುಬ್ಬಳ್ಳಿಯ ಸಿಲ್ವರ್ ಟೌನ್ ನಲ್ಲಿ ಘಟನೆ ನಡೆದಿದ್ದು ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿ ಮೌಲಾಲಿ ಕೊಲೆಯಾಗಿದ್ದಾನೆ. ಹೊಟ್ಟೆಪಾಡಿಗೆಂದು ಹುಬ್ಬಳ್ಳಿಗೆ ಗೌಂಡಿ ಕೆಲಸಕ್ಕೆಂದು ಹೋಗಿದ್ದ ಎನ್ನಲಾಗಿದೆ.

ಮೌಲಾಲಿಯನ್ನು ನಿರ್ಮಾಣ ಹಂತದಲ್ಲಿರುವ ಮನೆಯ ಮುಂಭಾಗದಲ್ಲಿಯೇ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಗೋಕುಲ್ ರೋಡ್ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿದ್ದು, ತನಿಖೆ ನಡೆಸಿದ್ದಾರೆ. ಕೊಲೆ ಮಾಡಿ ಪರಾರಿಯಾದವರ ಶೋಧ ಕಾರ್ಯಕ್ಕೆ ಪೊಲೀಸರು ಮುಂದಾಗಿದ್ದಾರೆ.

error: Content is protected !!