ಮುಂಡಗೋಡ ತಾಲೂಕಿನ ಗೊಟಗೋಡಿಕೊಪ್ಪ ಸಮೀಪದ ಮುಕ್ತಿ ಮಠದ ಹತ್ತಿರ ಎರಡು ವರ್ಷದ ಗಂಡು ಚಿರತೆ ದಾರುಣ ಸಾವು ಕಂಡಿದೆ‌. ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಚಿರತೆಯ ಸಾವು ಹೇಗಾಯ್ತು ಅನ್ನೋ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.

ಮದ್ಯಾಹ್ನವೇ..?
ಶುಕ್ರವಾರ ಮದ್ಯಾಹ್ನವೇ ಗೋಟಗೋಡಿಕೊಪ್ಪದ ಮುಕ್ತಿ ಮಠದ ಹತ್ತಿರದ ಗದ್ದೆಗಳ ಪಕ್ಕದಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ. ಸ್ಥಳೀಯ ರೈತರು ಚಿರತೆಯ ಮೃತದೇಹ ಕಂಡು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ತಕ್ಷಣವೇ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಮೃತದೇಹದ ಕುರಿತು ಮುಂದಿನ ಕ್ರಮ ಕೈಗೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ‌.

ಹೇಗೆ ಸಾವು..?
ಅಂದಹಾಗೆ, ರಸ್ತೆ ಪಕ್ಕದ ಗದ್ದೆಯಲ್ಲಿ ಚಿರತೆ ಸಾವು ಕಂಡಿದೆ. ಆದ್ರೆ, ಯಾವ ಕಾರಣಕ್ಕೆ ಸಾವು ಕಂಡಿದೆ ಅನ್ನೋ ಮಾಹಿತಿಯನ್ನು ಅರಣ್ಯ ಅಧಿಕಾರಿಗಳು ನೀಡಬೇಕಿದೆ‌. ಬಹುಶಃ ರಸ್ತೆ ದಾಟುವಾಗ ವಾಹನಗಳಿಗೆ ಡಿಕ್ಕಿಯಾಗಿ ಸಾವುಜ ಕಂಡಿತಾ..? ಅಥವಾ ಬೇರೆ ಯಾವುದಾದರೂ ಕಾರಣಕ್ಕೆ ಸಾವು ಕಂಡಿದೆಯಾ ವೈದ್ಯರ ವದಿಯ ಬಳಿಕವಷ್ಟೇ ಮಾಹಿತಿ ದೊರೆಯಬೇಕಿದೆ.

ಸದ್ಯ ಕಾತೂರು ಅರಣ್ಯ ವ್ಯಾಪ್ತಿಯ RFO ಮಂಜುನಾಥ ನಾಯ್ಕ್ ಸೇರಿದಂತೆ ಇಲಾಖಾ ಅಧಿಕಾರಿಗಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

error: Content is protected !!