ಮುಂಡಗೋಡಿನ ಲೋಕೋಪಯೋಗಿ ಇಲಾಖೆಯ ಇಂಜಿನೀಯರ್ ಆಗಿ ಕಾರ್ಯನಿರ್ವಹಿಸಿದ್ದ, ಸದ್ಯ ಕಲಘಟಗಿ PWD ಉಪವಿಭಾಗದ ಸಹಾಯಕ ಇಂಜಿನೀಯರ್ ಆಗಿ ಕಾರ್ಯ ನಿರ್ವಹಿಸ್ತಿದ್ದ ಎಂ.ರಾಮರಾವ್ ವಿಧಿವಶರಾಗಿದ್ದಾರೆ.

ಇಂದು ಬೆಳಿಗ್ಗೆ ಹೃದಯಾಘಾತದಿಂದ ವಿಧಿವಶರಾಗಿದ್ದು, ಹುಬ್ಬಳ್ಳಿಯ ಸನ್ಪೋಲ್ ಚರ್ಚ್ ಹತ್ತಿರ ಮೃತರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇನ್ನು ಎಂ.ರಾಮರಾವ್ ರವರ ಅಂತಿಮ‌ ಸಂಸ್ಕಾರ ನಾಳೆ ದಿನಾಂಕ 28 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಹುಬ್ಬಳ್ಳಿಯ ಗದಗ ರಸ್ತೆಯ ಸನ್ ಪೀಟರ್ ಚರ್ಚನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಅಂತಾ ಕುಟುಂಬದವರು ಮಾಹಿತಿ ನೀಡಿದ್ದಾರೆ.

error: Content is protected !!