ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಜಲಾಶಯದಲ್ಲಿ ಈಜಲು ತೆರಳಿದ್ದ ವ್ಯಕ್ತಿಯೋರ್ವ ‌ನೀರು ಪಾಲಾಗಿದ್ದಾನೆ. ನಾಲ್ಕೈದು ಸ್ನೇಹಿತರೊಂದಿಗೆ ಜಲಾಶಯಕ್ಕೆ ಬಂದಿದ್ದ ಶಿರಸಿಯ ವ್ಯಕ್ತಿ ನೀರಲ್ಲಿ ಮುಳುಗಿದ್ದು, ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆಸಲಾಗ್ತಿದೆ.

ಶಿರಸಿ ಸಮೀಪದ ಅಂಡಗಿಯ ಅಜೀದ್ ಗುಡೂಸಾಬ್(34) ಎಂಬುವ ವ್ಯಕ್ತಿಯೇ ಜಲಾಶಯದಲ್ಲಿ ನಾಪತ್ತೆಯಾಗಿದ್ದಾನೆ. ಈತ ಇಂದು ಶಿರಸಿಯಿಂದ ತನ್ನ ಸ್ನೇಹಿತರ ಜೊತೆ ಮಳಗಿಯ ಧರ್ಮಾ ಜಲಾಶಯದ ಸೊಬಗು ಸವಿಯಲು ಬಂದಿದ್ದ. ಈ ವೇಳೆ ಈಜಲು ನೀರಿಗೆ ಇಳಿದ ಸಂದರ್ಭದಲ್ಲಿ ನೀರಲ್ಲೇ ನಾಪತ್ತೆಯಾಗಿದ್ದಾನೆ. ಹೀಗಾಗಿ, ತಕ್ಷಣವೇ ಮುಂಡಗೋಡ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಬಂದಿದ್ದಾರೆ. ನಾಪತ್ತೆಯಾದವನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇನ್ನು ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

error: Content is protected !!