ಮುಂಡಗೋಡ ತಾಲೂಕಿನ ಹಿರಿಯ ಸಹಕಾರಿ ಧುರೀಣ, ಉಗ್ನಿಕೇರಿ ಗ್ರಾಮದ ಬಸಯ್ಯ ಫಕ್ಕೀರಯ್ಯ ನಡುವಿ‌ನಮನಿ(86) ವಿಧಿವಶರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಸಯ್ಯ ನಡುವಿನಮನಿ, ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಅಂತಾ ಕುಟುಂಬದ ಮೂಲಗಳು ಮಾಹಿತಿ ನೀಡಿದ್ದಾರೆ.

ಇಂದೂರು ಸೊಸೈಟಿಯ ಅಧ್ಯಕ್ಷರಾಗಿ, ಮುಂಡಗೋಡ PLD ಬ್ಯಾಂಕಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಮೃತರು, ತಾಲೂಕಿನ ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದರು. ಹಂಡೆ ಬಸಯ್ಯ ಅಂತಲೇ ತಾಲೂಕಿನಲ್ಲಿ ಚಿರಪರಿಚಿತರಾಗಿದ್ದರು.

ಮೃತರು ಮೂವರು ಸಹೋದರರು, ಮೂವರು ಸಹೋದರಿಯರು, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಮೃತರ ಅಗಲಿಕೆಗೆ ತಾಲೂಕಿನ ಹಲವರು ಸಂತಾಪ ಸೂಚಿಸಿದ್ದಾರೆ. ಅಂದಹಾಗೆ, ನಾಳೆ ಮದ್ಯಾನ 1 ಗಂಟೆಗೆ ತಾಲೂಕಿನ ಉಗ್ನಿಕೇರಿಯಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಲಿದೆ ಅಂತಾ ತಿಳಿದು ಬಂದಿದೆ.

error: Content is protected !!