ಶಿರಸಿ: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಮಗೆ ಹಣ ಕೊಟ್ಟಿದೆ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿಕೆಗೆ ಶಾಸಕ ಶಿವರಾಮ ಹೆಬ್ಬಾರ್ ಖಡಕ್ ತಿರುಗೇಟು ನೀಡಿದ್ದಾರೆ.

ಶಿರಸಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡುತ್ತಿದ್ದ ಹೆಬ್ಬಾರ್, ಬೇರೆ ಬೇರೆ ರಾಜ್ಯದಲ್ಲಿ ಬಿಜೆಪಿಯವರೆ ಕಾಂಗ್ರೆಸ್ ಶಾಸಕರನ್ನ ಖರೀದಿ ಮಾಡಿದ್ದಾರಲ್ಲ ಅವರಿಗೆಲ್ಲಾ ಎಷ್ಟೆಷ್ಟು ಕೋಟಿ ಹಣ ನೀಡಿದ್ದಾರೆಂಬುದನ್ನು ಈಶ್ವರಪ್ಪ ಬಹಿರಂಗ ಪಡಿಸಲಿ ಅಂತಾ ತಿರುಗೇಟು ನೀಡಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಶಿವರಾಮ ಹೆಬ್ಬಾರ್, ಉತ್ತರ ಪ್ರದೇಶ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯವರು ಕಾಂಗ್ರೆಸ್‌ನವರಿಗೆ ಎಷ್ಟು ಹಣ ಕೊಟ್ಟಿದ್ದಾರೆ ಎನ್ನುವುದನ್ನು ಕೇಳಬೇಕಾಗುತ್ತದೆ. ಉತ್ತರಪ್ರದೇಶದಲ್ಲಿ ಏನು ಅಡ್ಡಮತದಾನವಾಯಿತು ಅಲ್ಲಿ ಎಷ್ಟೆಷ್ಟು ಇನ್ವೆಸ್ಟಮೆಂಟ್ ಮಾಡಿದ್ದಾರಂತಾ ಕೇಳಬೇಕಾಗುತ್ತದೆ ಅಂತಾ ಖಾರವಾಗೇ ತಿವಿದ್ರು.

ಈಶ್ವರಪ್ಪನ ಮಾತನ್ನು ಬಿಜೆಪಿಯಲ್ಲಿ ಯಾರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಅವರ ಮಾತಿಗೆ ಬೆಲೆಯಿಲ್ಲದಂತಾಗಿದೆ. ಈ ಹಿಂದೆ ಇದೆ ಈಶ್ವರಪ್ಪ ಏನೆಲ್ಲಾ ಮಾಡಿಕೊಂಡು ರಾಜೀನಾಮೆ ನೀಡಿದ್ದಾರೆ ಎನ್ನುವುದು ರಾಜ್ಯದ ಜನರಿಗೆ ಚೆನ್ನಾಗಿ ಗೊತ್ತು, ಈಶ್ವರಪ್ಪನವರಿಗೂ ಗೊತ್ತಿದೆ. ರಾಜ್ಯದಲ್ಲಿ ಬಿಜೆಪಿ ಬರುವಾಗ ಈಶ್ವರಪ್ಪ ನಮಗೆ ಎಷ್ಟು ಕೋಟಿ ಹಣ ಕೊಟ್ಟಿದ್ದರು ಅಂತಾ ಹೇಳಬೇಕು. ಮಾತನಾಡಲು ಬರುತ್ತದೆ ಅಂತಾ ಏನಾದ್ರೂ ಮಾತನಾಡಬಾರದು.. ಈಶ್ವರಪ್ಪ ಗಾಜಿನ ಮನೆಯಲ್ಲಿದ್ದುಕೊಂಡು ಕಲ್ಲು ಹೊಡೆಯುವಾಗ ತಾವು ಗಾಜಿನ ಮನೆಯಲ್ಲಿದ್ದೇವೆ ಎಂದು ಎಚ್ಚರಿಕೆ ವಹಿಸಬೇಕಿರುವುದು ಅವರ ಹಿರಿತನಕ್ಕೆ ಒಳ್ಳೆಯದು ಅಂತಾ ಎಚ್ಚರಿಸಿದ್ರು.

error: Content is protected !!