ಶಿರಸಿ: ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಪೋಸ್ಟರ್ ಅಂಟಿಸಿ ವಿರೋಧ ವ್ಯಕ್ತಪಡಿಸಿದ್ದಾರೆ “ಕೈ” ಕಾರ್ಯಕರ್ತರು.

ಶಿರಸಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶಿವರಾಮ್ ಹೆಬ್ಬಾರ್ ವಿರುದ್ಧ ಪೋಸ್ಟರ್ ಅಂಟಿಸಿರುವ ಕೈ ಕಾರ್ಯಕರ್ತರು, “ನಮ್ಮ‌‌ ಪಕ್ಷ, ನಮ್ಮ ಹಕ್ಕು, ಭ್ರಷ್ಟರಿಗಿಲ್ಲಿ ಜಾಗವಿಲ್ಲ” ಎಂದು ಪೋಸ್ಟರ್ ಅಂಟಿಸಿದ್ದಾರೆ.

ಕಾಂಗ್ರೆಸ್ ‌ನಿಂದ‌ ಬಾಂಬೆ ಟೀಂ ಜತೆ ಬಿಜೆಪಿಗೆ ಹೋಗಿ ಸಚಿವರಾಗಿದ್ದ ಹೆಬ್ಬಾರ್ ಸಾಹೇಬ್ರು, ಈಗ ಮತ್ತೆ ಕೆಲವು ಅಸಮಾಧಾನದ ಕಾರಣ ಕಾಂಗ್ರೆಸ್ ಬಾಗಿಲು‌ ತಟ್ಟುತ್ತಿದ್ದಾರೆ. ಹೀಗಾಗಿ, ಹೆಬ್ಬಾರ್ ಕಾಂಗ್ರೆಸ್ ‌ಸೇರ್ಪಡೆಗೆ ಸದ್ದಿಲ್ಲದೇ ವಿರೋಧ ವ್ಯಕ್ತವಾಗಿದೆ.

ಸಚಿವರು, ಶಾಸಕರು ಮಾತ್ರವಲ್ಲದೇ ಕಾರ್ಯಕರ್ತರಿಂದಲೂ ವಿರೋಧ ವ್ಯಕ್ತವಾಗಿದ್ದು, ಇಂದು ಶಿರಸಿಯಲ್ಲಿ ಕಾಂಗ್ರೆಸ್ ಲೋಕಸಭೆ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಉಪಸ್ಥಿತಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆಯಲಿದ್ದು, ಸಭೆಗೆ ಮುಂಚಿತವಾಗಿ ಹೆಬ್ಬಾರ್ ವಿರುದ್ಧ ಪೊಸ್ಟರ್ ಅಂಟಿಸಿ ಆಕ್ರೋಶ ಹೊರಹಾಕಿದ್ದಾರೆ ಕೈ ಕಾರ್ಯಕರ್ತರು.

error: Content is protected !!