ಮುಂಡಗೋಡಿನಲ್ಲಿಂದು ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆಯುತ್ತಿದೆ. ಉತ್ತರ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆದ್ರೆ, ಈ ಸಮಾವೇಶದ ವೇದಿಕೆಯಲ್ಲಿ ಹಾಕಿರೋ ಬ್ಯಾನರ್ ನಲ್ಲಿ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ರವರ ಭಾವಚಿತ್ರವನ್ನೇ ಹಾಕಿಲ್ಲ.

ಅಂದಹಾಗೆ, ಇಂದು ನಡೆಯುತ್ತಿರೋ ಸಮಾವೇಶದಲ್ಲಿ ಬಹುತೇಕ ಜಿಲ್ಲಾ ನಾಯಕರು ಭಾಗವಹಿಸಿಲಿದ್ದಾರೆ ಎನ್ನಲಾಗ್ತಿದೆ. ಈ ಕಾರಣಕ್ಕಾಗಿನೇ, ವೇದಿಕೆಯ ಬ್ಯಾನರನಲ್ಲಿ ರಾಷ್ಟ್ರ ನಾಯಕರು, ರಾಜ್ಯ ನಾಯಕರು ಹಾಗೂ ಜಿಲ್ಲಾಮಟ್ಟದ ನಾಯಕರುಗಳ ಭಾವಚಿತ್ರ ಹಾಕಲಾಗಿದೆ. ಜೊತೆಗೆ ಬಿಜೆಪಿಯ ಮಾಜಿ ಶಾಸಕರುಗಳ ಭಾವಚಿತ್ರವನ್ನೂ ಹಾಕಲಾಗಿದೆ. ಆದ್ರೆ, ಯಲ್ಲಾಪುರ ಕ್ಷೇತ್ರದಲ್ಲೇ ನಡೆಯುತ್ತಿರೋ ಸಮಾವೇಶದಲ್ಲಿ ಸ್ಥಳೀಯ ಬಿಜೆಪಿ ಶಾಸಕರ ಭಾವಚಿತ್ರವನ್ನೇ ಹಾಕಿಲ್ಲ.

ಬಿಜೆಪಿಗೆ ಬೇಡವಾದ್ರಾ ಹೆಬ್ಬಾರ್..?
ಅಸಲು, ಮುಂಡಗೋಡಿನ ಬಿಜೆಪಿ ಸಮಾವೇಶದಲ್ಲಿ ಹೆಬ್ಬಾರರ ಭಾವಚಿತ್ರ ಹಾಕದೇ ಇರೋದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಬಹುಶಃ ಶಿವರಾಮ್ ಹೆಬ್ಬಾರರು ಇಲ್ಲಿನ ಬಿಜೆಪಿಗೆ ಬೇಡವಾದ್ರಾ ಅನ್ನೋ ಪ್ರಶ್ನೆ ಏಳುವಂತೆ ಮಾಡಿದೆ.‌

error: Content is protected !!