ಹುನಗುಂದ ಬಳಿ ಭೀಕರ ಅಪಘಾತ, ಬೈಕ್ ಓಮಿನಿ ನಡುವೆ ಡಿಕ್ಕಿ, ನಂದಿಕಟ್ಟಾದ ಬೈಕ್ ಸವಾರ ಸಾವು, ಮತ್ತೋರ್ವನಿಗೆ ಗಾಯ..!

ಮುಂಡಗೋಡ: ತಾಲೂಕಿನ ಹುನಗುಂದ ಹಾಗೂ ಟಿಬೇಟಿಯನ್ ಕ್ಯಾಂಪ್ ನಂ. 8 ರ ರಸ್ತೆ ಮದ್ಯೆ ಭೀಕರ ಅಪಘಾತವಾಗಿದೆ. ಓಮಿನಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾ‌ನೆ. ಮತ್ತೋರ್ವನಿಗೆ ಗಾಯವಾಗಿದೆ.

ನಂದಿಕಟ್ಟಾ ಗ್ರಾಮದ ಕೃಷ್ಣ ಸೋಮಣ್ಣ ಕಟಾವಕರ್ (54) ಎಂಬುವವನೇ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇನ್ನು ಪ್ರಭು(36) ಎಂಬುವ ಬೈಕ್ ಹಿಂಬದಿಯ ಸವಾರ ಗಾಯಗೊಂಡಿದ್ದಾನೆ.

ಬೈಕ್ ಸವಾರರು ಹುನಗುಂದ ಗ್ರಾಮಕ್ಕೆ ತೆರಳುತ್ತಿದ್ದರು. ಹಾಗೇನೆ ಹುನಗುಂದ ಕಡೆಯಿಂದ ವರುತ್ತಿದ್ದ ಓಮಿನಿ ನಡುವೆ ಡಿಕ್ಕಿಯಾಗಿದೆ. ಹೀಗಾಗಿ, ಗಂಭೀರವಾಗಿ ಗಾಯಗೊಂಡಿದ್ದ ಕೃಷ್ಣ ಕಟಾವಕರನನ್ನು ತಕ್ಷಣವೇ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ಆದ್ರೆ, ಅಷ್ಟೊತ್ತಿಗಾಗಲೇ ಬೈಲ್ ಸವಾರ ಸಾವನ್ನಪ್ಪಿದ್ದಾನೆ ಅಂತಾ ತಿಳಿದು ಬಂದಿದೆ‌.

ಇನ್ನು, ಮತ್ತೋರ್ವ ಗಾಯಾಳುವಿಗೆ ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!