ಮುಂಡಗೋಡ ತಾಲೂಕಿನ ಪಾಳಾ ಸಮೀಪದ ಕಲಕೊಪ್ಪದಲ್ಲಿ ಭಾರೀ ಅನಾಹುತ ಸಂಭವಿಸಿದೆ. ಮೊದಲ ದಿನದ ಮಳೆಯಲ್ಲೇ ಐದು ಹಸುಗಳು ದಾರುಣ ಸಾವು ಕಂಡಿವೆ. ಸಿಡಿಲು ಬಡಿದು ಗದ್ದೆಯಲ್ಲಿದ್ದ 5 ಹಸುಗಳು ಮೃತಪಟ್ಟಿವೆ.

ಪಾಳಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲಕೊಪ್ಪ ಗ್ರಾಮದ ಪಕ್ಕೀರ ಗೌಡ ಕಡಬಗೇರಿ ಎಂಬುವವರ ಐದು ಹಸುಗಳು ಗದ್ದೆಯಲ್ಲಿ ಸಿಡಿಲು ಬಡಿದು ದಾರುಣವಾಗಿ ಸಾವನ್ನಪ್ಪಿವೆ.

ಇಂದು ಸುರಿದ ಬಿರುಗಾಳಿ ಸಹಿತ ಭಾರೀ ಮಳೆಯಲ್ಲಿ ಸಿಡಿಲ ಅರ್ಭಟದಿಂದ ಅನಾಹುತ ಸಂಭವಿಸಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!