ಕೊಪ್ಪದ ಕುಟ್ರಿಯವರ ಹುಡುಗ “ಅಭಿ” ಇನ್ನು ನೆನಪು ಮಾತ್ರ..! ಕ್ರೂರ ವಿಧಿಯೇ ಧಿಕ್ಕಾರವಿರಲಿ

ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದ ಅಭಿಷೇಕ ಬಸವಂತಪ್ಪ ಕುಟ್ರಿ ಮೃತಪಟ್ಟಿದ್ದಾನೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅಭಿಷೇಕಙ್ನು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದ್ರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಅಂದಹಾಗೆ, ಸದಾ ಹಸನ್ಮಖಿಯಾಗಿದ್ದ ಹುಡುಗ ಅಭಿಷೇಕ ಮುಂಡಗೋಡಿನ ಮಹಾರಾಜಾ ಮೊಬೈಲ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಕಳೆದ ಎರಡು ಮೂರು ದಿನಗಳಿಂದ ಕೊಂಚ ಜ್ವರದಿಂದ ಬಳಲುತ್ತಿದ್ದ ಅಭಿಷೇಕ ಗೆ ಹುಬ್ಬಳ್ಳಿ ಕೀಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಎರಡು ದಿನಗಳ ನಂತ್ರ ಇಂದು ರವಿವಾರ ರಾತ್ರಿ ಸಾವನ್ನಪ್ಪಿದ್ದಾನೆ.

ಅಭಿಷೇಕ ಕುಟ್ರಿ ಸಾವಿಗೆ, ಪಬ್ಲಿಕ್ ಫಸ್ಟ್ ನ್ಯೂಸ್ ಬಳಗ ಸೇರಿ ಮುಂಡಗೋಡ ತಾಲೂಕಿನ ಹಲವು ಸ್ನೇಹಿತರು ಕಂಬನಿ ಮಿಡಿದಿದ್ದಾರೆ.

error: Content is protected !!