ಕೊಲೆ ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ, ದರ್ಶನ್ ಪ್ರಕರಣದಲ್ಲಿ ಆರೋಪಿ ಅಷ್ಟೆ ಅಪರಾಧಿ ಅಲ್ಲ: ದರ್ಶನ್ ಬಗ್ಗೆ ಮೌನ ಮುರಿದ ಸುಮಲತಾ ಅಂಬರೀಶ್

ಕೊಲೆ ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ, ದರ್ಶನ್ ಪ್ರಕರಣದಲ್ಲಿ ಆರೋಪಿ ಅಷ್ಟೆ ಇನ್ನು ಯಾವುದು ಸಾಬೀತಾಗಿಲ್ಲ ಅಥವಾ ಶಿಕ್ಷೆಯಾಗಿಲ್ಲ.
ದರ್ಶನ್ ನಿರಾಪರಾಧಿ ಎಂದು ಸಾಬೀತುಪಡಿಸಿ ಹೊರ ಬರುತ್ತಾರೆ. ದರ್ಶನ್ ಬಗ್ಗೆ ಪೋಸ್ಟ್ ಹಾಕಿದ ಮಾಜಿ ಸಂಸದೆ ಸುಮಲತಾ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೊನೆಗೂ ಮೌನ ಮುರಿದ ಮಾಜಿ ಸಂಸದೆ ಸುಮಲತಾ ಅಂಬರೀಶ್ ಘಟನೆ ಬಗ್ಗೆ ಸುದೀರ್ಘ ಮಾಹಿತಿ ಹಂಚಿಕೊಂಡಿದ್ದಾರೆ. ಫೇಸ್ ಬುಕ್ ನಲ್ಲಿ ಫೋಸ್ಟ್ ಮಾಡಿರುವ ಸುಮಲತಾ ಅಂಬರೀಶ್, ರೇಣುಕಾಸ್ವಾಮಿ ಕೊಲೆಗೆ ಸಂತಾಪ ಸೂಚಿಸಿದ್ದಾರೆ. ಕುಟುಂಬಕ್ಕೆ ನೋವನ್ನ ಭರಿಸುವ ಶಕ್ತಿ ದೇವರು ನೀಡಲಿ,ಅವರಿಗೆ ನ್ಯಾಯ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಘಟನೆ ನನ್ನ ಹೃದಯವನ್ನ ಛಿದ್ರಗೊಳಿಸಿದೆ, ಬಹಳ ದಿನ ಆಘಾತ ಹಾಗೂ ನೋವು ತಂದಿದೆ.

ಸುಮಲತಾ ಹಾಗೂ ದರ್ಶನ್ ಸಂಬಂಧದ ಬಗ್ಗೆ ಕೂಡ ಫೋಸ್ಟ್..!
ದರ್ಶನ್ ಸ್ಟಾರ್ ಆಗುವುದಕ್ಕೂ ಮೊದಲು ಪರಿಚಯ. ಸ್ಟಾರ್ ಗಿಂತ ನನ್ನ ಕುಟುಂಬದ ಸದಸ್ಯ, ಯಾವಾಗಲೂ ನನಗೆ ಮಗನಂತೆ. ನನಗೆ ತಾಯಿಯ ಗೌರವ ಮತ್ತು ಸ್ಥಾನ ಹಾಗೂ ಮಗನ ಪ್ರೀತಿ ನೀಡಿದ್ದಾರೆ. ಯಾವ ತಾಯಿಯೂ ಈ ಪರಿಸ್ಥಿತಿಯಲ್ಲಿ ಮಗುವನ್ನು ನೋಡಲು ಸಹಿಸುವುದಿಲ್ಲ.
ಈ ಕೃತ್ಯವನ್ನು ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ ಎಂದು ನಾನು ನಂಬಿದ್ದೇನೆ. ಪ್ರಕರಣ ಕೋರ್ಟ್ ನಲ್ಲಿ ಇರುವುದರಿಂದ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ.
ದರ್ಶನ್ ಜೊತೆಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ಮುಗ್ಧ ಮಗನನ್ನು ಸಾಮಾಜಿಕ ಮಾಧ್ಯಮದಲ್ಲಿ ಗುರಿಯಾಗಿಸಿ ಕೊಂಡಿರುವುದು ತುಂಬಾ ಅನ್ಯಾಯವಾಗಿದೆ.
ತಮ್ಮ ಕಾಮೆಂಟ್ ಹೇಗೆ ಪರಿಣಾಮ ಬೀರಬಹುದು ಎಂಬುದನ್ನು ಪರಿಗಣಿಸಿದ್ದೇನೆ. ದರ್ಶನ್ ಪ್ರಕರಣದಲ್ಲಿ ಆರೋಪಿಯಾಗಿದ್ದು, ಇನ್ನು ಯಾವುದು ಸಾಬೀತಾಗಿಲ್ಲ ಅಥವಾ ಶಿಕ್ಷೆಯಾಗಿಲ್ಲ.

ಈ ಪರಿಸ್ಥಿತಿಯಲ್ಲಿ ನಾನು ನೆಮ್ಮದಿಯಿಂದ ಸಮಸ್ಯೆಯಿಂದ ದೂರವಿರುವುದು ಅಸಾಧ್ಯ. ಇದು ನನ್ನದೇ ಕೌಟುಂಬಿಕ ಸಮಸ್ಯೆ ಚಿತ್ರರಂಗ ಅಸ್ತವ್ಯಸ್ತವಾಗಿದೆ. ದರ್ಶನ್ ತಾವು ನಿರಾಪರಾಧಿ ಎಂದು ಸಾಬೀತುಪಡಿಸಿ ಹೊರ ಬರುತ್ತಾರೆ. ಚಿತ್ರೀಕರಣ ಸಾಮಾನ್ಯ ಜೀವನವನ್ನು ಪುನಾರಾರಂಬಿಸುತ್ತಾರೆ ಎಂದು ನಾನು ಭರವಸೆ ಹೊಂದಿದ್ದೇನೆ.

ದರ್ಶನ್ ಅಭಿಮಾನಿಗಳಿಗೂ ಮನವಿ
ದಯವಿಟ್ಟು ಶಾಂತವಾಗಿರಿ. ಮತ್ತು ಈ ಕ್ಷಣದಲ್ಲಿ ಹೇಳಿಕೆಗಳನ್ನ ನೀಡಬೇಡಿ. ನಮ್ಮಲ್ಲಿ ಕಾನೂನಿಗಿಂತ ಯಾರು ಮೇಲಲ್ಲ ನಾವು ಅದನ್ನ ಗೌರವಿಸಬೇಕು.
ಒಳ್ಳೆಯ ಸಮಯ ಮರಳಲು ಪ್ರಾರ್ಥಿಸಬೇಕು. ಕಾನೂನು ವ್ಯವಸ್ಥೆ ಮೇಲೆ ನಂಬಿಕೆ ಇರಲಿ, ದೇವರಲ್ಲಿ‌ನಂಬಿಕೆ ಇರಲಿ.
ಎಲ್ಲವೂ ಸರಿಯಾಗುತ್ತವೆ ಸತ್ಯಮೇವ ಜಯತೆ ಅಂತ ಫೋಸ್ಟ್ ಹಾಕಿದ್ದಾರೆ.

ಸುಮಲತಾ ಅಂಬರೀಶ್ ಹಾಕಿರೋ ಪೋಸ್ಟ್ ಗಳು

 

error: Content is protected !!