ಮುಂಡಗೋಡ: ತಾಲೂಕಿನ ಮೈನಳ್ಳಿಯಲ್ಲಿ ಜನಶಕ್ತಿ ಧನಗರ ಸಹಕಾರಿ ಸಂಘವನ್ನು ಶಾಸಕ ಶಿವರಾಮ್ ಹೆಬ್ಬಾರ್ ಉದ್ಘಾಟಿಸಿ, ನೂತನ ಸಹಕಾರಿ ಸಂಘಕ್ಕೆ ಶುಭ ಹಾರೈಸಿದರು.

ದೀಪ ಬೆಳಗಿಸುವುದರ ಮೂಲಕವಾಗಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕರು ನೂತನ ಸಹಕಾರಿ ಸಂಘದ ಹುಟ್ಟಿನಿಂದ ಬಡವರ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕೆ ಅನೂಕುಲವಾಗಲಿದೆ ಇಂತಹ ಸಹಕಾರಿ ಸಂಘವು ಜನರ ಹಣಕ್ಕೆ ಭದ್ರತೆಯನ್ನು ನೀಡುವುದರ ಜೊತೆಯಲ್ಲಿ ಅಧ್ಯಕ್ಷರು ಹಾಗೂ ನಿರ್ದೇಶಕರು ಜವಾಬ್ದಾರಿಯಿಂದ ನಡೆದುಕೊಂಡು ಸಾರ್ವಜನಿಕರ ಹಣವನ್ನು ಕಾಯುವ ಕಾವಲುಗಾರರಾಗಿ ಕಾರ್ಯನಿರ್ವಾಹಿಸಬೇಕು ಹಾಗೂ ಧನಗರ ಗೌಳಿ ಸಮುದಾಯದ ಈ ಸಹಕಾರಿ ಸಂಘದ ಬಲವರ್ಧನೆ ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ವಿ.ಎಸ್‌.ಪಾಟೀಲ್, ಕೆ.ಪಿ.ಸಿ.ಸಿ ಸದಸ್ಯರಾದ ವಿವೇಕ್ ಹೆಬ್ಬಾರ್, ಜಿಲ್ಲಾ ಪಂಚಾಯತ ಮಾಜಿ ಸದಸ್ಯ ರವಿಗೌಡ ಪಾಟೀಲ್, ಎಲ್.ಟಿ.ಪಾಟೀಲ್, ಪ್ರಮುಖರಾದ ಎಚ್.ಎಮ್.ನಾಯ್ಕ, ಕೃಷ್ಣ ಹಿರೇಹಳ್ಳಿ, ದೇವು ಪಾಟೀಲ್, ಸಿದ್ದಪ್ಪ ಹಡಪದ, ಕೆ.ಸಿ.ಗಲಭಿ, ನಾಗಭೂಷಣ ಹಾವಣಗಿ, ಸಹಕಾರಿ ಸಂಘದ ಅಧ್ಯಕ್ಷ ಕೊಂಡು ಯಾಮಕರ್ ಸೇರಿದಂತೆ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

error: Content is protected !!