ಉ.ಕನ್ನಡದಲ್ಲಿ ನಾಳೆ ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ, ನಿರಂತರ ಮಳೆ ಹಿನ್ನೆಲೆ ಡಿಸಿ ಆದೇಶ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಕಾರಣದಿಂದ, ಜಿಲ್ಲಾಧ್ಯಂತ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶುಕ್ರವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ

ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ, ಹಳಿಯಾಳ, ದಾಂಡೇಲಿ ಹಾಗೂ ಯಲ್ಲಾಪುರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಶುಕ್ರವಾರ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಎಲ್ಲ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 26 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..

error: Content is protected !!