ಜಿಲ್ಲೆಯಲ್ಲಿ ನಾಳೆ ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶುಕ್ರವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ.

ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಶುಕ್ರವಾರ ಅಗಷ್ಟ 2 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇಂದಿನ ಮಳೆಯ ಹಾನಿ..!
ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 13 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಕಾರವಾರದ 2, ಅಂಕೋಲ ದ 1, ಹೊನ್ನಾವರ ದ 9,ಜೋಯಿಡಾ ದ 1 ಮತ್ತು ಕುಮಟಾ ದ 1 ಸೇರಿದಂತೆ ಒಟ್ಟು 14 ಕಾಳಜಿ ಕೇಂದ್ರಗಳಲ್ಲಿ 550 ಮಂದಿಗೆ ಆಶ್ರಯ ಕಲ್ಪಿಸಲಾಗಿದೆ.

error: Content is protected !!