ಮುಂಡಗೋಡ ಬಸವನ ಹೊಂಡದಲ್ಲಿ ವ್ಯಕ್ತಿಯ ಶವ ಪತ್ತೆ, ಆತ್ಮಹತ್ಯೆ ಮಾಡಿಕೊಂಡನಾ ಕಂಬಾರಗಟ್ಟಿಯ ಶಿವಾಜಿ..?

ಮುಂಡಗೋಡ ಪಟ್ಟಣದ ಬಸವನ ಹೊಂಡದಲ್ಲಿ ವ್ಯಕ್ತಿಯೋರ್ವನ ಶವ ದೊರೆತಿದೆ. ಬೆಳ್ಳಂ ಬೆಳಿಗ್ಗೆ ಹೊಂಡದಲ್ಲಿ ಶವ ತೇಲುತ್ತಿರುವುದನ್ನು ಕಂಡ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಪಿಎಸ್ಐ ಪರಶುರಾಮ್ ಟೀಂ ಸ್ಥಳಕ್ಕೆ ಧಾವಿಸಿ ಶವ ಹೊರತೆಗೆದಿದ್ದಾರೆ‌.

ಇನ್ನು ಹೊಂಡದಲ್ಲಿ ಪತ್ತೆಯಾಗಿರೋ ಶವ ಮುಂಡಗೋಡ ಪಟ್ಟಣದ ಕಂಬಾರಗಟ್ಟಿಯ ಶಿವಾಜಿ ಬಿಸೆಟ್ಟಿ (60) ಅಂತಾ ಗುರುತಿಸಲಾಗಿದೆ. ಯಾವುದೋ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಂತಾ ಶಂಕಿಸಲಾಗಿದೆ. ಸದ್ಯ ಶವ ಹೊರತೆಗೆಯಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

error: Content is protected !!