ಜಸ್ಟ್ ಪೋನಿನಲ್ಲಿ ಮಹಿಳೆ ಜೊತೆ ಮಾತಾಡಿದ ಅಂತಾ ಮೂಳೆ ಮುರಿಯುವಂಗೆ ಹೊಡೆದ್ರು..!

ಧಾರವಾಡ: ಮಹಿಳೆ ಜೊತೆ ಪೋನಿನಲ್ಲಿ ಮಾತನಾಡಿದ್ದಾನೆಂದು ಸಂಶಯ ಪಟ್ಟು ಟಂಟಂ ಚಾಲಕನ ಮೇಲೆ ಒಂದೇ ಕುಟುಂಬದವರಿಂದ ಹಲ್ಲೆ ನಡೆದಿದೆ.
ಧಾರವಾಡ ತಾಲೂಕಿನ ವೆಂಕಟಾಪೂರ ಗ್ರಾಮದ ಮಾವಿನ ತೋಟದಲ್ಲಿ ಘಟನೆ ನಡೆದಿದೆ.

ಇಮಾಮ್ ಸಾಬ್ ದೇವರಮನೆ (34) ಎನ್ನುವ ಟಂಟಂ ಚಾಲಕನ ಮೇಲೆ, ಸುಮಾರು 10 ಜನರಿಂದ ಮಾರಣಾಂತಿಕ ಹಲ್ಲೆ ನಡೆದಿದೆ. ತೀವ್ರ ಹಲ್ಲೆಗೆ ಒಳಗಾದ ಇಮಾಮಸಾಬ್ ನ ಎರಡು ಕೈ ಮುರಿತಗೊಂಡಿವೆ. ಎಲುಬು ಮುರಿಯುವಂತೆ ಹೊಡೆದು ಕೈ ಮುರಿದಿರುವ ದುಷ್ಕರ್ಮಿಗಳು.

ಕೊಟೂರು ಗ್ರಾಮದ ಅಗಸಿಮನಿ ಎಂಬ ಕುಟುಂಬದ ಹತ್ತು ಜನರ ಮೇಲೆ ಹಲ್ಲೆ ಆರೋಪ ಕೇಳಿ ಬಂದಿದೆ. ಅಗಸಿಮನಿ ಕುಟುಂಬದ ಮಹಿಳೆ ಜೊತೆ ಟಂಟಂ ಚಾಲಕ ಇಮಾಮ್ ಮಾತಾಡಿದ್ದಾನೆ ಎಂದು ಸಂಶಯ ಪಟ್ಟು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಅಸ್ಲಂ, ಇಸಾಕ್, ಶಕೀಲ್, ಅಪ್ಪಲಾಲ್, ನಿಸಾರ್, ಹಜರುದ್ದೀನ್, ಮುಜಮೀಲ್ ಸೇರಿ ಒಟ್ಟು 10 ಜನರಿಂದ ಹಲ್ಲೆ ನಡೆದಿದೆ. ಹಲ್ಲೆ ಮಾಡಿದ 10 ಜನರ ಮೇಲೆ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸದ್ಯ ಗಾಯಾಳು ಇಮಾಮ್ ಸಾಬ್ ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

error: Content is protected !!