ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಗೆ ಕೃಷ್ಣ ಹಿರೇಹಳ್ಳಿ ನೂತನ ಅಧ್ಯಕ್ಷ..! ಜ್ಞಾನದೇವ ಗುಡಿಹಾಳ್ ರಿಗೆ ಕೋಕ್..!


ಮುಂಡಗೋಡ ಬ್ಲಾಕ್ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆಯಾಗಿದೆ. ತಾಲೂಕಾ ಕಾಂಗ್ರೆಸ್ ನ ಹಿರಿಯ ಮುಖಂಡ ಕೃಷ್ಣ ಹಿರೇಹಳ್ಳಿಯವರನ್ನು ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಸೆಪ್ಟೆಂಬರ್ 20 ರಂದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಆದ್ರೆ, ಅದು ಒಂದು ವಾರದ ನಂತರ ಬಹಿರಂಗವಾಗಿದೆ.

ದಿಟ್ಟ ಹೆಜ್ಜೆ..!
ಅಸಲು, ಮುಂಡಗೋಡ ಕಾಂಗ್ರೆಸ್ ಗೆ ಇಂತಹದ್ದೊಂದು ಬದಲಾವಣೆಯ ಅವಶ್ಯಕತೆ ಇತ್ತು. ಹಾಗಂತಾ ಕಳೆದ ವಿಧಾನಸಭಾ ಚುನಾವಣೆ ಹೊತ್ತಿನಲ್ಲೇ ತಾಲೂಕಾ ಕಾಂಗ್ರೆಸ್ ನಲ್ಲಿ ಬಹಿರಂಗವಾಗೇ ಅಧ್ಯಕ್ಷರ ಬದಲಾವಣೆಗೆ ಆಗ್ರಹ, ಆಕ್ರೋಶಗಳು ಭುಗಿಲೆದ್ದಿದ್ದವು ಹೀಗಾಗಿ, ನಿರ್ಗಮಿತ ಅಧ್ಯಕ್ಷ ಜ್ಞಾನದೇವ ಗುಡಿಹಾಳರ ವಿರುದ್ಧ ರಾಜ್ಯ ನಾಯಕರ ಎದುರು ಸಾಕಷ್ಟು ಆರೋಪಗಳೂ ಸ್ಫೋಟಗೊಂಡಿದ್ದವು ಹೀಗಾಗಿ, ರಾಜ್ಯ ಕಾಂಗ್ರೆಸ್ ಮಹತ್ವದ ತೀರ್ಮಾನ ಮಾಡಿದೆ. ಕೃಷ್ಣ ಹಿರೇಹಳ್ಳಿಯವರನ್ನ ಅಧ್ಯಕ್ಷರನ್ನಾಗಿ ನೇಮಿಸಿದೆ.

error: Content is protected !!