ಹುಬ್ಬಳ್ಳಿ ಸಿಲಿಂಡರ್​ ಬ್ಲಾಸ್ಟ್​: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!

ಹುಬ್ಬಳ್ಳಿ: ಸಿಲಿಂಡರ್ ಸ್ಫೋಟಗೊಂಡು ತೀರ್ವವಾಗಿ ಗಾಯಗೊಂಡು ಕಿಮ್ಸ್​ಗೆ ದಾಖಲಾಗಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟಿದ್ದಾರೆ. ರಾಜು ಮೂಗೇರಿ (16) ಮೃತ ದುರ್ದೈವಿ. ಇದ್ರೊಂದಿಗೆ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಡಿಸೆಂಬರ್​ 22ರಂದು ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟಗೊಂಡು 9 ಜನ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. 9 ಜನರನ್ನು ಕಿಮ್ಸ್​ಗೆ ದಾಖಲಿಸಲಾಗಿತ್ತು. ಈ ವರೆಗೆ ಮೂವರು ಮೃತಪಟ್ಟಿದ್ದು, ಆರು ಜನರಿಗೆ ಚಿಕಿತ್ಸೆ ಮುಂದುವರೆದಿದೆ.

ಹುಬ್ಬಳ್ಳಿಯ ಉಣಕಲ್ ಸಮೀಪ ಇರುವ ಅಚ್ಚವ್ಚನ ಕಾಲೋನಿಯಲ್ಲಿ ಡಿಸೆಂಬರ್​ 22 ರಂದು ಬೆಳಗಿನ ಜಾವ ಸಿಲಿಂಡರ್ ಸ್ಪೋಟಗೊಂಡು 9 ಜನ ಮಾಲಾಧಾರಿಗಳು ಗಾಯಗೊಂಡಿದ್ದರು. 9 ಜನರಿಗೆ ಹುಬ್ಬಳ್ಳಿಯ‌ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗತಿತ್ತು. ಬೆಂಗಳೂರಿನಿಂದ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಗುರುವಾರ (ಡಿ.26) ಚಿಕಿತ್ಸೆ ಫಲಿಸದೆ ಇಬ್ಬರು ಮೃತಪಟ್ಟಿದ್ದರು. ಇಂದು (ಡಿ.27) ಮತ್ತೊಬ್ಬ ಅಯ್ಯಪ್ಪ ಮಾಲಧಾರಿ ಸಾವಿಗೀಡಾಗಿದ್ದಾರೆ.

8 ವರ್ಷದ ನಿಜಲಿಂಗಪ್ಪ ಬೇಪುರಿ, 18 ವರ್ಷದ ಸಂಜಯ್ ಸವದತ್ತಿ, 16 ವರ್ಷದ ರಾಜು ಮೂಗೇರಿ ಮೃತರಾಗಿದ್ದಾರೆ. ಹೀಗಾಗಿ, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಾಲಾಧಾರಿಗಳು ಸಾವನ್ನಪ್ಪಿದ ಹಿನ್ನಲೆಯಲ್ಲಿ ಐವರು ಅಯ್ಯಪ್ಪನ ಮಾಲೆಯನ್ನು ತಗೆದಿದ್ದಾರೆ.

error: Content is protected !!