IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!

ಕಾರವಾರ: ಮಾರ್ಚ್ 22 ರಿಂದ ಆರಂಭವಾಗ್ತಿರೋ IPL ಕ್ರಿಕೆಟ್ ಟೂರ್ನಿಗಾಗಿ ಇಡೀ ದೇಶವೇ ಕಾದು ಕುಳಿತಿದೆ. ಅದ್ರ ಜೊತೆ ಅಕ್ರಮಿಗಳು ಇದೇ ಒಂದು ಹಬ್ಬ ಅಂತ ಅನಕೊಂಡು ಕ್ರಿಕೆಟ್ ಬೆಟ್ಟಿಂಗ್ ದಂಧೆಗೂ ರೆಡಿಯಾಗ್ತಿದಾರೆ ಅನ್ನೊ ಅನುಮಾನವಿದೆ. ಹೀಗಾಗಿ, ಐಪಿಎಲ್ ಟೂರ್ನಿಯುದ್ದಕ್ಕೂ ಮನರಂಜನೆಗಿಂತ ಬೆಟ್ಟಿಂಗ್ ದಂಧೆಯೇ ಬಲು ಜೋರಾಗಿದ್ದು ಯುವಕರು ಜೀವನಕ್ಕೆ ಮಾರಕವಾಗೋ ಸಾಧ್ಯತೆ ಇದೆ. ಹೀಗಾಗಿ, ಉತ್ತರ ಕನ್ನಡ ಖಡಕ್ ಎಸ್ಪಿ ಎಂ ನಾರಾಯಣ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಟ್ಟಿಂಗ್ ಭೂತದಿಂದ ಹಣ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಎದುರಾಗುತ್ತಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ದಂಧೆಗೆ ಕಡಿವಾಣ ಹಾಕಲು ಮಾಸ್ಟರ್ ಪ್ಲಾನ್ ಮಾಡಿಕೊಂಡಿದ್ದಾರಂತೆ.

ಐಪಿಎಲ್ ಬಂತೆಂದರೆ ಸಾಕು 2 ತಿಂಗಳ ಕಾಲ ಯುವಕರು ಫುಲ್ ಬ್ಯುಸಿ. ಹಳ್ಳಿ ಹಳ್ಳಿಗಳಲ್ಲೂ ಬೆಟ್ಟಿಂಗ್‌ದೇ ಮಾತು. ಬೆಟ್ಟಿಂಗ್ ದಂಧೆಗೆ ಬಲಿಯಾಗಿ ಯುವಕರು ತಮ್ಮ ಹಣ ಮಾತ್ರವಲ್ಲ ಭವಿಷ್ಯವನ್ನೇ ಕಳೆದುಕೊಳ್ತಿದ್ದಾರೆ. ಕೋಟ್ಯಂತರ ರೂಪಾಯಿ ಹಣದ ವ್ಯವಹಾರ ನಡೆಯುವ ಈ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಲು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಬೆಟ್ಟಿಂಗ್ ಮಾಡುವವರಿಗೆ ಖಡಕ್ ವಾರ್ನಿಂಗ್ ನೀಡಿದ್ದು,ಪ್ರತಿ ಪೊಲೀಸ್ ಠಾಣೆಗಳಿಗೆ ಹದ್ದಿನ ಕಣ್ಣಿಡಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಬೆಟ್ಟಿಂಗ್ ಮಾಡಿ ಹಣಕಳೆದುಕೊಂಡು ಜೀವನ ಹಾಳುಮಾಡಿಕೊಳ್ಳುತ್ತಿರುವ ನಮ್ಮ ಯುವಕರು ಸಾಲಗಾರರಾಗುತ್ತಿದ್ದಾರೆ, ಕೆಲವರು ಜೀವವನ್ನು ಕಳೆದುಕೊಳ್ಳುತ್ತಿದ್ದಾರೆ, ಇದನ್ನು ಸಂಪೂರ್ಣವಾಗಿ ತೊಲಗಿಸಲು ಪೊಲೀಸ್ ಇಲಾಖೆ ಬೆಟ್ಟಿಂಗ್ನಲ್ಲಿ ತೊಡಗಿದ್ದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಿದ್ದೇವೆ. ಅನುಮಾನಾಸ್ಪದವಾಗಿ ಕಂಡು ಬಂದರೆ ಅಂತವರ ಮೊಬೈಲ್ ಅನ್ನು ಮುಟ್ಟುಗೋಲು ಹಾಕಿಕೊಂಡು ಸೂಕ್ತ ಕ್ರಮ ಕೈಗೊಳ್ಳಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

error: Content is protected !!