ಕ್ಷುಲಕ ಕಾರಣಕ್ಕೆ ಬಾಲಕರ ಜಗಳ, ಕೊಲೆಯಲ್ಲಿ ಅಂತ್ಯ.. 9ನೇ ತರಗತಿ ಬಾಲಕನಿಗೆ ಚಾಕು ಇರಿದ 6ನೇ ತರಗತಿ ಬಾಲಕ..!

ಕ್ಷುಲ್ಲಕ ಕಾರಣಕ್ಕೆ 9ನೇ ತರಗತಿ ಓದುತ್ತಿದ್ದ ಬಾಲಕನೊರ್ವನಿಗೆ, 6ನೇ ತರಗತಿ ಓದುತ್ತಿದ್ದ ಮತ್ತೋರ್ವ ಬಾಲಕ ಚಾಕುವಿನಿಂದ ಇರಿದ ಪರಿಣಾಮ ಬಾಲಕ‌ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಕಮರಿಪೇಟೆಯ ಜೀ ಅಡ್ಡಾದಲ್ಲಿ ನಡೆದಿದೆ.

ಚೇತನ ರಕ್ಕಸಗಿ (12:)ಎಂಬಾತ‌ ಚಾಕು ಇರಿತಕ್ಕೆ ಸಾವನ್ನಪ್ಪಿದ್ದಾನೆ. ಇನ್ನು ಸಾಯಿ ಹಬೀಬ್ ಎಂಬಾತ ಚಾಕು ಇರಿದಿದ್ದಾನೆ ಎಂದು ತಿಳಿದುಬಂದಿದೆ. ಎಂದಿನಂತೆ ಚೇತನ ಮನೆಯಲ್ಲಿ ಚಹ ಕುಡಿದು, ಮೊದಲೇ ಮನೆಯಲ್ಲಿ ಸಂಬಂಧಿಕರ ಮದುವೆ ಹಿನ್ನೆಲೆಯಲ್ಲಿ ತನಗೆ ಹೊಸ ಬಟ್ಟೆ ತರುವಂತೆ ತನ್ನ ತಾಯಿಗೆ ತಿಳಿಸಿ ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಸಾಯಿ ಹಬೀಬ್ ಜೊತೆಗೆ ಜಗಳ ಏರ್ಪಟಿದೆ, ಈ ವೇಳೆ ಸಾಯಿ ಹಬೀಬ್ ರೇಡಿಯಂ ಕಟರ್ ದಿಂದ ಇರಿದಿದ್ದಾನೆ. ಪರಿಣಾಮ ಚೇತನ್ ಗಂಭೀರವಾಗಿ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ.

ಆಪರೇಶನ್‌ ಸಿಂಧೂರ | ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನ, ಚೀನಾ ನಿರ್ಮಿತ ಏರ್ ಡಿಫೆನ್ಸ್ ಧ್ವಂಸ : ಸೇನೆಯಿಂದ ವೀಡಿಯೊ ಬಿಡುಗಡೆ..!

ಈ ಕುರಿತಂತೆ ಹುಬ್ಬಳ್ಳಿಯ ಧಾರವಾಡ ‌ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಂತರ ಮಾತನಾಡಿದ ಅವರು, ನನ್ನ ಜೀವನದಲ್ಲೇ ಇಂತಹ ಘಟನೆ ನಾನು ನೋಡಿಲ್ಲ. ಆರನೇ ತರಗತಿಯ ಬಾಲಕ ಕೊಲೆ ಮಾಡುವಂತಹ ಮನಸ್ಥಿತಿ ಬಂದಿದೆ. ಪೋಷಕರು ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಅಂತಾ ಆತಂಕ ಹೊರ ಹಾಕಿದರು.


ಕಮರಿಪೇಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಗುರುಸಿದ್ದೇಶ್ವರ ನಗರದಲ್ಲಿ ಬಾಲಕರಿಬ್ಬರ ನಡುವೆ ಜಗಳ ಆರಂಭ ಆಗಿದೆ. ಓರ್ವ ಬಾಲಕ ಮನೆಗೆ ಹೋಗಿ ಚಾಕು ತಂದು ಇನ್ನೊಬ್ಬನಿಗೆ ಇರಿದಿದ್ದಾನೆ. 9 ನೇ ತರಗತಿ ಕಲಿಯುವ ಮಗು, ಕೂಡಲೇ ಇರಿದ ಬಾಲಕನ ತಾಯಿ ಇರಿತಕ್ಕೊಳಗಾದ ಬಾಲಕನ್ನನ್ನ ಆಸ್ಪತ್ರೆಗೆ ಕರೆತಂದಿದ್ದಾಳೆ.
ಗಾಯದ ತೀವ್ರತೆ ಅಂದಾಜಿಲ್ಲ ಕಿಮ್ಸ್ ಗೆ ತಂದಾಗ ಬಾಲಕ ಸಾವನ್ನಪ್ಪಿದ್ದಾನೆ ಅಂತ ವೈದ್ಯರು ತಿಳಿಸಿದ್ದಾರೆ. ಇದು ಹೃದಯ ವಿದ್ರಾವಕ ಘಟನೆ . ಆರನೇ ತರಗತಿ ಮಗು, ನಮ್ಮ ಸೊಂಟಕ್ಕೂ ಬರೋದಿಲ್ಲ . ಅಂತಹ ಮಗು ಇಂತಹ ಕೃತ್ಯ ಎಸಗಿದೆ. ಮೃತ ಬಾಲಕ ಸಹ 8ನೇ ತರಗತಿ ಪಾಸ್ ಆಗಿದ್ದಾನೆ. ಒಬ್ಬನೇ ಮಗ, ತಂದೆ ರೊಟ್ಟಿ ವ್ಯಾಪಾರ ಮಾಡ್ತಿದ್ದ ಬಡ ಕುಟುಂಬ ಆರೋಪಿ ಬಾಲಕನ ಕುಟುಂಬವು ಬಡ ಕುಟುಂಬ. ಏನು ಪ್ರೊಸಿಸರ್ ಇದೆಯೋ ಅದರ ಪ್ರಕಾರ ಮಾಡಲಾಗುತ್ತೆ ಎಂದು‌ ಮಾಹಿತಿ‌ ‌ನೀಡಿದರು.

error: Content is protected !!