ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!

ಕಾರವಾರ- ಜಿಲ್ಲೆಯಲ್ಲಿ ಐ.ಪಿ.ಎಲ್ ಬೆಟ್ಟಿಂಗ್, ಅನಧಿಕೃತ ಲಾಟರಿ/ಮಟ್ಕಾ ಹಾವಳಿಯ ಪ್ರಕರಣಗಳು ನಡೆಯದಂತೆ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.

ಅವರು ಬುಧವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಅನಧಿಕೃತ ಲಾಟರಿ ಹಾಗೂ ಮಟ್ಕಾ ಹಾವಳಿ ನಿಯಂತ್ರಣ ಪ್ಲೆಯಿಂಗ್ ಸ್ಕ್ವಾಡ್‌ನ 2024-25 ನೇ ಸಾಲಿನ ನಾಲ್ಕನೆಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ..!

ಪ್ರಸಕ್ತ ತ್ರೈಮಾಸಿಕದಲ್ಲಿ ಒಟ್ಟು 31 ಮಟ್ಕಾ ಪ್ರಕರಣಗಳಲ್ಲಿ 86 ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿರುವ ಬಗ್ಗೆ ಹಾಗೂ ಯಾವುದೇ ಅನಧಿಕೃತ ಲಾಟರಿ ಹಾವಳಿ ಪ್ರಕರಣಗಳು ದಾಖಲಾಗದೇ ಇರುವ ಬಗ್ಗೆ ಮಾಹಿತಿ ಪಡೆದು, ಜಿಲ್ಲೆಯನ್ನು ಸಂಪೂರ್ಣ ಅನಧಿಕೃತ ಲಾಟರಿ/ಮಟ್ಕಾ ಹಾವಳಿ ಮುಕ್ತ ವಲಯವನ್ನಾಗಿ ಮಾಡಲು ಪ್ಲೈಯಿಂಗ್ ಸ್ಕ್ಯಾಡ್‌ನ ಸದಸ್ಯರು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಸಭೆಯಲ್ಲಿ ಪೋಲಿಸ್ ನಿರೀಕ್ಷಕರಾದ ನಿತ್ಯಾನಂದ ಪಂಡಿತ್, ವಾಣಿಜ್ಯ ತೆರಿಗೆ ಅಧಿಕಾರಿ ಷಣ್ಮುಗಪ್ಪ ನರೇಗಲ್, ಪಿಂಚಣಿ ಇಲಾಖೆಯ ಸಹಾಯಕ ನಿರ್ದೇಶಕ ಗಣೇಶ ಪಟಗಾರ, ಅಭಿವೃದ್ಧಿ ಅಧಿಕಾರಿ ಕಾಶಿಮಸಾಬ ಮುಲ್ಲಾ, ಶೋಲಿನ್ ಡಿ’ಕೋಸ್ಟಾ, ಮತ್ತಿತರರು ಉಪಸ್ಥಿತರಿದ್ಧರು.