RCB Fans Deram Shattered: ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಈ ಋತುವಿನಲ್ಲಿ ಈ ವರೆಗೂ ಭರ್ಜರಿ ಪ್ರದರ್ಶನ ನೀಡಿದ್ದು ಪ್ಲೇಆಫ್​ಗೆ ಎಂಟ್ರಿ ಪಡೆದುಕೊಂಡಿದೆ. ಒಂದೆಡೆ ಆರ್​ಸಿಬಿ ಪ್ಲೇಆಫ್​ ತಲುಪಿರುವ ಖುಷಿ ಅಭಿಮಾನಿಗಳಲ್ಲಿ ಮನೆ ಮಾಡಿದ್ದರೇ ಮತ್ತೊಂದೆಡೆ ದೊಡ್ಡ ಬೇಸರವು ಕಾಣಿಸಿಕೊಂಡಿದೆ.

ಸದ್ಯ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಿರುವ ಕಾರಣ ಮೇ.23 ರಂದು ನಡೆಯಬೇಕಿದ್ದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಮತ್ತು ಸನ್​ ರೈಸರ್ಸ್​​ ಹೈದರಾಬಾದ್​ ನಡುವಿನ ಪಂದ್ಯ ಬೆಂಗಳೂರಿನಿಂದ ಲಖನೌಗೆ ಸ್ಥಳಾಂತರ ಮಾಡಲಾಗಿದೆ. ಇದರ ಬೆನ್ನಲ್ಲೇ ಆರ್​ಸಿಬಿ ಫ್ಯಾನ್ಸ್​ ಕಂಡಿದ್ದ ಆ ಕನಸು ಕೂಡ ಭಗ್ನ ಗೊಂಡಿದೆ.

ಹೌದು, ಇತ್ತೀಚೆಗೆ ಭಾರತ ಕ್ರಿಕೆಟ್​ ತಂಡದ ವಿರಾಟ್​ ಕೊಹ್ಲಿ ಟೆಸ್ಟ್​ಗೆ ನಿವೃತ್ತಿ ಘೋಷಣೆ ಮಾಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಇದರ ಬೆನ್ನಲ್ಲೇ ಆರ್​ಸಿಬಿ ಫ್ಯಾನ್ಸ್​ ಸಾಮಾಜಿಕ ಜಾಲತಾಣದಲ್ಲಿ ವಿರಾಟ್​ ಕೊಹ್ಲಿಗೆ ಗೌರವ ಸಲ್ಲಿಸಲು ಆರ್​ಸಿಬಿ ಮತ್ತು ಕೆಕೆಆರ್​ ನಡುವಿನ ಪಂದ್ಯಕ್ಕೆ ಬಿಳಿ ಜೆರ್ಸಿ ಧರಿಸಿ ಮೈದಾನಕ್ಕೆ ಬರುವಂತೆ ಮನವಿ ಮಾಡಿಕೊಂಡಿದ್ದರು.

ಪಾಕಿಸ್ತಾನಿಯ ಜೊತೆ ನನ್ನ ಮದುವೆ‌ ಮಾಡಿಸಿ, ಪಾಕ್ ಅಧಕಾರಿಯೊಂದಿಗೆ ಜ್ಯೋತಿ ಮಲ್ಹೊತ್ರಾ ವಾಟ್ಸಾಪ್ ಚಾಟಿಂಗ್..!

ಅದರಂತೆ ಮೇ.17ಕ್ಕೆ ಫ್ಯಾನ್ಸ್​ ಬಿಳಿ ಜೆರ್ಸಿ ಧರಿಸಿ ಮೈದಾನಕ್ಕೆ ಬಂದಿದ್ದರು. ಆದರೇ ಅಂದು ಮಳೆರಾಯ ಪಂದ್ಯಕ್ಕೆ ಅಡ್ಡಿ ಪಡ್ಡಿಪಡಿಸಿದ್ದ. ಇದರಿಂದಾಗಿ ಎರಡೂ ತಂಡಗಳಿಗೆ ತಲಾ ಒಂದು ಅಂಕವನ್ನು ನೀಡಿ ಪಂದ್ಯ ರದ್ದು ಗೊಳಿಸಲಾಯಿತು. ಇದರ ಬೆನ್ನಲ್ಲೆ ಆರ್​ಸಿಬಿಗರು ಮೇ.23ಕ್ಕೆ ಅಂದ್ರೆ ನಾಳೆ ಶುಕ್ರವಾರ ನಡೆಯಲಿರುವ ಪಂದ್ಯದಲ್ಲಿ ಬಿಳಿ ಜೆರ್ಸಿ ಧರಿಸಿ ಬರುವುದಕ್ಕೆ ಮುಂದಾಗಿದ್ದರು.

ಆದರೆ ಬೆಂಗಳೂರಿನಲ್ಲಿ ಮಳೆಯ ಮುಂದುವರೆದ ಕಾರಣ ಪಂದ್ಯವನ್ನು ಲಖನೌಗೆ ಸ್ಥಳಾಂತರ ಮಾಡಲಾಗಿದೆ. ಇದೀಗ ಫ್ಯಾನ್ಸ್​ಗಳಿಗೆ ಭಾರೀ ನಿರಾಸೆ ಮೂಡಿದೆ. ತಾವು ಕಂಡಿದ್ದ ಕನಸಿಗೆ ವರುಣ ತಣ್ಣೀರೆರೆಚಿದ್ದಾನೆ ಎಂದು ಬೇಸರಗೊಂಡಿದ್ದಾರೆ.

ಪ್ಲೇಆಫ್ ಗೆ RCB ಎಂಟ್ರಿ..!
ಈ ಋತುವಿನಲ್ಲಿ ಆರ್​ಸಿಬಿ ಭರ್ಜರಿ ಪ್ರದರ್ಶನ ನೀಡಿ ಈಗಾಗಲೇ ಪ್ಲೇಆಫ್​ಗೆ ತಲುಪಿದೆ. ಈವರೆಗೂ ಆಡಿರುವ 12 ಪಂದ್ಯಗಳ ಪೈಕಿ 8 ರಲ್ಲಿ ಗೆಲುವು ಸಾಧಿಸಿದೆ. ಮೂರಲ್ಲಿ ಸೋಲನ್ನು ಕಂಡಿದೆ, ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿದೆ.

ಸದ್ಯ ಆರ್​ಸಿಬಿ 17 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇದೀಗ ಉಳಿದಿರುವ ಮುಂದಿನ ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿ ಅಗ್ರ ಸ್ಥಾನದಲ್ಲಿ ಉಳಿಯಲು ಸಿದ್ಧತೆ ನಡೆಸಿದೆ. ಆರ್​ಸಿಬಿ ತನ್ನ ಮುಂದಿನ ಪಂದ್ಯದಲ್ಲಿ ಹೈದರಾಬಾದ್​ ತಂಡವನ್ನು ಎದುರಿಸಲಿದೆ. ತನ್ನ ಕೊನೆಯ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ವಿರುದ್ಧ ಸೆಣಸಲಿದೆ.

error: Content is protected !!