Bakrid Peace Meeting; ಕಾರವಾರ: ತ್ಯಾಗ,ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವಂತೆ ಎಲ್ಲಾ ಸಮುದಾಯಗಳ ಮುಖಂಡರಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯಾ ತಿಳಿಸಿದರು.
ಅವರು ಗುರುವಾರ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ , ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ವತಿಯಿಂದ ನಡೆದ , ಬಕ್ರೀದ್ ಹಬ್ಬದ ಪ್ರಯುಕ್ತದ ಜಿಲ್ಲಾ ಮಟ್ಟದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದನ್ನೂ ಓದಿ👉ಜೂನಿನಲ್ಲೇ ಬಿಡುಗಡೆ ಆಗಲಿದೆ ಪಿಎಂ ಕಿಸಾನ್ 20ನೇ ಕಂತು; ಫಲಾನುಭವಿಗಳ ಇ-ಕೆವೈಸಿ ಕಡ್ಡಾಯ..!
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಯಾವುದೇ ರೀತಿಯ ಅಡಚಣೆಯಾಗದಂತೆ ಸಾಂಪ್ರದಾಯಿಕ ರೀತಿಯಲ್ಲಿ , ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದೇ, ಶಾಂತಿಯುತವಾಗಿ ಬಕ್ರೀದ್ ಹಬ್ಬವನ್ನು ಆಚರಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಇದಕ್ಕಾಗಿ ಜಿಲ್ಲಾಡಳಿತದ ವತಿಯಿಂದ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಬಕ್ರೀದ್ ಸಮಯದಲ್ಲಿ ತ್ಯಾಜ್ಯ ವಿಲೇವಾರಿಗೆ ಹೆಚ್ಚಿನ ಆದ್ಯತೆ ನೀಡಿ, ಅದನ್ನು ವ್ಯವಸ್ಥಿತವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವಂತೆ ನಗಾಭಿವೃಧ್ದಿಕೋಶದ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಪಶುಪಾಲನೆ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ಪೊಲೀಸ್ ಇಲಾಖೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡುವಂತೆ ತಿಳಿಸಿದರು.
ಇದನ್ನೂ ಓದಿ👉2027 ಮಾರ್ಚ್ 1ರಿಂದ ಜನಗಣತಿ ಆರಂಭ; ಜೊತೆಗೆ ಜಾತಿ ಗಣತಿಯೂ ಆರಂಭ..!
ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಟ ತಡೆಗೆ ಪೊಲೀಸ್ ಇಲಾಖೆವತಿಯಿಂದ 24 ಕಡೆ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು, ಅಕ್ರಮ ಗೋ ಸಾಗಾಟ ಪ್ರಕರಣದಲ್ಲಿ ಭಾಗಿಯಾದವರಿಗೆ 7 ವರ್ಷಗಳ ಕಾಲ ಜೈಲು ಶಿಕ್ಷೆ ಮತ್ತು 10 ಲಕ್ಷದ ವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದರು.
ಇದನ್ನೂ ಓದಿ👉ತಮ್ಮ ಮಗನನ್ನೇ ಕಚ್ಚಿ ಕೊಂದಿದ್ದ ವಿಷ ಸರ್ಪವನ್ನು ಜೋಪಾನವಾಗಿ ಹಿಡಿದು ಕಾಡಿಗೆ ಬಿಟ್ಟ ಕುಟುಂಬ..!
ಸಾರ್ವಜನಿಕರು ಸೋಷಿಯಲ್ ಮೀಡಿಯಾಗಳಲ್ಲಿ ಪ್ರಕಟವಾಗುವ ಧಾರ್ಮಿಕ ಭಾವನೆ ಕೆರಳಿಸುವ ಯಾವುದೇ ಫೇಕ್ ನ್ಯೂಸ್ಗಳನ್ನು ನಂಬದಂತೆ ತಿಳಿಸಿದ ಜಿಲ್ಲಾಧಿಕಾರಿಗಳು ಸಾರ್ವಜನಿಕರು ಯಾವುದೇ ಗೊಂದಲಗಳಿದ್ದಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಕಂಟ್ರೋಲ್ ರೂಂ ಗಳನ್ನು ಸಂಪರ್ಕಿಸಿ ನೈಜ ಮಾಹಿತಿ ಪಡೆಯುವಂತೆ ಮತ್ತು ಎಲ್ಲಾ ಧರ್ಮದವರೂ ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬದ ಆಚರಣೆಯಲ್ಲಿ ತೊಡಗಿಕೊಳ್ಳುವಂತೆ ತಿಳಿಸಿದರು.
Bakrid Peace Meeting;
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಎಂ. ಮಾತನಾಡಿ, ಬಕ್ರೀದ್ ಸಮಯದಲ್ಲಿ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡಲು ಎಲ್ಲಾ ತಾಲೂಕುಗಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸಭೆಗಳನ್ನು ನಡೆಸಲಾಗಿದೆ. ಜಿಲ್ಲೆಯಾದ್ಯಂತ ಪ್ರಾರ್ಥನಾ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ ಮತ್ತು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಕೂಡಾ ಸಿಸಿಟಿವಿಗಳನ್ನು ಅಳವಡಿಸಲಾಗಿದೆ.
ಇದನ್ನೂ ಓದಿ👉RCB ತಂಡದಿಂದ ಐಪಿಎಲ್ 2025 ಟ್ರೋಫಿ ಹಿಂಪಡೆದ BCCI..! ಯಾಕೆ ಗೊತ್ತಾ..?
ಸೋಷಿಯಲ್ ಮೀಡಿಯಾ ಗಳಲ್ಲಿ ಫೇಕ್ ನ್ಯೂಸ್ ಹರಡುವುದನ್ನು ತಡೆಯಲು ಸಾಮಾಜಿಕ ಮಾಧ್ಯಮಗಳ ಮೇಲೆ 24×7 ನಿಗಾವಹಿಸಲಾಗಿದೆ. ಅಕ್ರಮ ಜಾನುವಾರು ಸಾಗಾಟ ತಡೆಯಲು ಜಿಲ್ಲೆಯ 24 ಕಡೆಗಳಲ್ಲಿ 24×7 ಕಾರ್ಯನಿರ್ವಹಿಸುವ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ. ಬಕ್ರೀದ್ ಪ್ರಯುಕ್ತ 4 ದಿನಗಳ ಕಾಲ ಹೆಚ್ಚಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಕೋಮು ಪ್ರಚೋದಕ ಭಾಷಣದ ವಿರುದ್ದ ನಿಗಾ ವಹಿಸಲಾಗಿದ್ದು, ಯಾವುದೇ ಕಾನೂನು ಉಲ್ಲಂಘನೆಯ ಚಟುವಟಿಕೆಗಳು ಕಂಡು ಬಂದಲ್ಲಿ ಸಾರ್ವಜನಿಕರು ಕೂಡಲೇ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ತಿಳಿಸಿದ ಅವರು, ಜಿಲ್ಲೆಯಲ್ಲಿ ಕಾನೂನು ಉಲ್ಲಂಘಿಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಇದನ್ನೂ ಓದಿ👉RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣ, ಸಿದ್ದಾಪುರದ ಮಹಿಳೆಯೂ ಬಲಿ..!
ಸಭೆಯಲ್ಲಿ ಹಾಜರಿದ್ದ ಹಿಂದೂ ಮತ್ತು ಮುಸ್ಲಿಂ ಸಂಘಟನೆಗಳ ಮುಖಂಡರು ಮಾತನಾಡಿ, ಜಿಲ್ಲೆಯು ಶಾಂತಿಗೆ ಹೆಸರುವಾಸಿಯಾಗಿದ್ದು, ಬಕ್ರೀದ್ ಹಬ್ಬದ ಸಮಯದಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಲು ಬಿಡುವುದಿಲ್ಲ , ಪರಸ್ಪರ ಸಾಮರಸ್ಯದಿಂದ ಶಾಂತಿಯುತವಾಗಿ ಹಬ್ಬವನ್ನು ಆಚರಣೆ ಮಾಡಲಾಗುವುದು.
ಜಿಲ್ಲೆಯಲ್ಲಿ ಅಕ್ರಮ ಜಾನುವಾರು ಸಾಗಾಟದ ವಿರುದ್ದ ಎರಡೂ ಸಮುದಾಯಗಳು ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ ಶಾಂತಿಯುತ ವಾತಾವರಣಕ್ಕಾಗಿ ಜಿಲ್ಲಾಡಳಿತಕ್ಕೆ ಎಲ್ಲಾ ರೀತಿಯ ಸಹಕಾರವನ್ನು ನಿರಂತರವಾಗಿ ನೀಡಲಾಗುವುದು ಎಂದರು.
ಇದನ್ನೂ ಓದಿ👉RCB ವಿಜಯೋತ್ಸವ, ಕುಣಿದು ಕುಪ್ಪಳಿಸುತ್ತಿದ್ದಾಗಲೇ ಹೃದಯಾಘಾತ, ಅಭಿಮಾನಿ ಸಾವು..!
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕೃಷ್ಣಮೂರ್ತಿ, ಜಗದೀಶ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್ , ಪಶುಸಂಗೋಪನೆ ಹಾಗೂ ನಗರಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಜಿಲ್ಲೆಯ ಎಲ್ಲಾ ವಿಭಾಗಗಳ ಡಿವೈಎಸ್ಪಿಗಳು, ಪೊಲೀಸ್ ಅಧಿಕಾರಿಗಳು, ಹಿಂದೂ ಮತ್ತು ಮುಸ್ಲಿಂ ಸಂಘಟನೆಗಳ ಮುಖಂಡರು ಹಾಜರಿದ್ದರು.