Krishna river flowing; ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮುಂದುವರೆದ ಮಳೆ ಆರ್ಭಟ. ಗಡಿ ಜಿಲ್ಲೆ ಬೆಳಗಾವಿಯಲ್ಲೂ ನಿಲ್ಲದ ಮಳೆ. ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಕಳೆದ ಒಂದು ವಾರದಿಂದ ಸುರಿಯುತ್ತಿರೋ ಮಳೆಯಿಂದ, ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ 90 ಸಾವಿರ ಕ್ಯೂಸೆಕ್ ಗೂ ಅಧಿಕ ಒಳ ಹರಿವು ಆಗಿದೆ. ಪ್ರವಾಹ ಪರಿಸ್ಥಿತಿ ತಗ್ಗಿಸಲು ಹಿಪ್ಪರಗಿ ಬ್ಯಾರೇಜನಿಂದ ಅಷ್ಟೇ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗ್ತಿದೆ. ಸದ್ಯ ಚಿಕ್ಕೋಡಿ ಉಪ ವಿಭಾಗದಲ್ಲಿ 6 ಕೆಳ ಹಂತದ ಸೇತುವೆಗಳು ಜಲಾವೃತವಾಗಿವೆ.
ಸೇತುವೆ ಸಂಪರ್ಕ ಕಡಿತ ಆಗಿದ್ದರಿಂದ 14 ಗ್ರಾಮಸ್ಥರು ಪರ್ಯಾಯ ಮಾರ್ಗವಾಗಿ ಸಂಚಾರ ಮಾಡುತ್ತಿದ್ದಾರೆ. ಕೃಷ್ಣಾ ನದಿ ಉಕ್ಕಿ ಹರಿಯುತ್ತಿದ್ದರಿಂದ ನೂರಾರು ಎಕರೆ ರೈತರ ಜಮೀನು ಜಲಾವೃತವಾಗಿದೆ. ಹೀಗಾಗಿ,
ಮಳೆಗಾಲದ ಆರಂಭದಲ್ಲೇ ನದಿ ಪಾತ್ರದ ಸಂಕಷ್ಟಕ್ಕೆ ಸಿಲುಕಿದ್ದಾರೆ.