Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

Uttar Kannada News Today;
ತಾಲೂಕಾ ಬಾಲಭವನ ಸೊಸೈಟಿ ಕಾರ್ಯಕ್ರಮ

ಕಾರವಾರ;  ಕಾರವಾರದ ಸುಮತಿ ದಾಮ್ಲೆ ಹೈಸ್ಕೂಲ್‌ನಲ್ಲಿ ಇತ್ತೀಚೆಗೆ ನಡೆದ ಬಾಲಭವನ ಸೊಸೈಟಿ ಕಾರ್ಯಕ್ರಮವನ್ನು ನಗರಸಭೆ ಸದಸ್ಯೆ ಸಂಧ್ಯಾ ಬಾಡಕರ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಬಾಲಭವನ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಹಾಗೂ ಶಿಶು ಅಭಿವೃದ್ದಿ ಯೋಜನಾಧಿಕಾರಿ ಶೋಭಾ ಡಿ ಮುಕಟಗಾರ ಮಾತನಾಡಿ, ಇಂದಿನ ಯುಗ ಸ್ಫರ್ಧಾತ್ಮಕ ಯುಗವಾಗಿದ್ದು, ಮಕ್ಕಳು ಸ್ಫರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯ ಆಗ ಮಾತ್ರ ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಹಾಗೂ ಭವಿಷ್ಯವನ್ನು ರೂಪಿಸಿಕೊಳ್ಳಲು ಅನುಕೂಲವಾಗುತ್ತದೆ . ಬಾಲ್ಯವಿವಾಹ ಹಾಗೂ ಫೋಕ್ಸೊ ಆಗುತ್ತಿದ್ದಲ್ಲಿ ನಮ್ಮ ಇಲಾಖೆಯ ಗಮನಕ್ಕೆ ಹಾಗೂ ಶಿಕ್ಷಕರಿಗೆ, ಪಾಲಕರಿಗೆ ಯಾವುದೇ ಮುಚ್ಚಮರೆ ಇಲ್ಲದೇ ತಿಳಿಸಬೇಕು. ಮಕ್ಕಳು ತಮ್ಮ ಉತ್ತಮ ಭವಿಷ್ಯಕ್ಕಾಗಿ ವಿದ್ಯಾಭ್ಯಾಸ ಅಷ್ಟೇ ಅಲ್ಲದೇ ಉತ್ತಮ ಪೌಷ್ಠಿಕ ಆಹಾರ ಸೇವಿಸಬೇಕು, ಎಲ್ಲಾ ಕ್ಷೇತ್ರದಲ್ಲೂ ಭಾಗವಹಿಸಿ ಮುಂದೆ ಬರಬೇಕು ಎಂದರು.

ಕಾರ್ಯಕ್ರಮದಲ್ಲಿ ಸುಮತಿ ದಾಮ್ಲೆ ಹೈಸ್ಕೂಲ್ ಮುಖ್ಯೋಫಾದ್ಯಾಯ ಅರುಣ ರಾಣೆ, ವಿದ್ಯಾರ್ಥಿಗಳು, ಶಿಕ್ಷಕರು, ಮೇಲ್ವಿಚಾರಕಿಯರು ಉಪಸ್ಥಿತರಿದ್ದರು.

***********************

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ: ಅರ್ಜಿ ಆಹ್ವಾನ

ಕಾರವಾರ; ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬಿ.ಎಸ್.ಸಿ ಮತ್ತು ಜಿ.ಎನ್.ಎಮ್ ನರ್ಸಿಂಗ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2025-26ನೇ ಸಾಲಿಗೆ ಪ್ರೋತ್ಸಾಹಧನವನ್ನು ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮತೀಯ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್,ಪಾರ್ಸಿ) ವಿದ್ಯಾರ್ಥಿಗಳು ಸೇವಾಸಿಂಧು ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು, ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ2.50ಲಕ್ಷ ಮೀರಿರಬಾರದು, ಹಿಂದಿನ ವರ್ಷದ ಪರೀಕ್ಷೆಯಲ್ಲಿ 50% ಅಂಕ ಗಳಿಸಿರಬೇಕು. ವಿದ್ಯಾರ್ಥಿಗಳನ್ನು ಅನುದಾನದ ಲಭ್ಯತೆಯನುಸಾರ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು, ವಿದ್ಯಾರ್ಥಿಗಳು ಪ್ರತಿ ಶೈಕ್ಷಣಿಕ ವರ್ಷದಲ್ಲಿ ಹೊಸ (Fresh) ಅರ್ಜಿಗಳನ್ನು ಸಲ್ಲಿಸಬೇಕು, ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ್ NPCI Mapping ಆಗಿರುವುದನ್ನು ಖಾತ್ರಿಪಡಿಸಿಕೊಳ್ಳತಕ್ಕದ್ದು.
ವಿದ್ಯಾರ್ಥಿಗಳು https://sevasindhu.karnataka.gov.inಈ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಅರ್ಜಿ ಪ್ರತಿಯನ್ನು ಅವಶ್ಯ ದಾಖಲೆಗಳೊಂದಿಗೆ ನಿಮ್ಮ ತಾಲ್ಲೂಕಿನ ಮಾಹಿತಿ ಕೇಂದ್ರಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ, ಅಥವಾ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಉತ್ತರ ಕನ್ನಡ, ಕಾರವಾರ ದೂರವಾಣಿ ಸಂಖ್ಯೆ: 08382-220336 ಅಥವಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಹಾಯವಾಣಿ 8277799990 ನ್ನು ಸಂಪರ್ಕಿಸುವAತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

*************************

ಭಟ್ಕಳ: ವಸತಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕಾರವಾರ; ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ 2.0 ಯೋಜನೆಯಡಿ ನಗರದ ವಸತಿ ರಹಿತ ಹಾಗೂ ನಿವೇಶನ ರಹಿತ ಕುಟುಂಬಗಳಿಗೆ (ಕಚ್ಚಾ ಮನೆ ಹೊಂದಿರುವ) ವಸತಿ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರದ Unified web portal  ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಭಟ್ಕಳ ಪುರಸಭಾ ವ್ಯಾಪ್ತಿಯೊಳಗಿನ ಎಲ್ಲಾ ವಾರ್ಡಗಳಲ್ಲಿರುವ ವಸತಿ ರಹಿತ (ಕಚ್ಚಾ ಮನೆ ಹೊಂದಿರುವ) ಮತ್ತು ನಿವೇಶನ ರಹಿತ ಅರ್ಹ ಫಲಾನಿಭವಿಗಳಿಗೆ ವಸತಿ ಸೌಲಭ್ಯ ಪಡೆಯಲು ಕೇಂದ್ರ ಸರ್ಕಾರದ Unified web portal  ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿದ್ದು( ಸಲ್ಲಿಸಿದ ಒಂದು ಪ್ರತಿಯನ್ನು ದಾಖಲೆಗಳೊಂದಿಗೆ ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ) ಹೆಚ್ಚಿನ ಮಾಹಿತಿಗಾಗಿ ಕಾರ್ಯಲಯದ ವಸತಿ ಶಾಖೆಯನ್ನು ಸಂಪರ್ಕಿಸುವಂತೆ ಭಟ್ಕಳ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

*********************
ದಾಂಡೇಲಿ: ವಸತಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕಾರವಾರ; ದಾಂಡೇಲಿ ನಗರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ನಿವೇಶನ ರಹಿತರ ಮತ್ತು ವಸತಿ ರಹಿತರ ಕುಟುಂಬಗಳ ಮಾಹಿತಿಯನ್ನು ಸಂಗ್ರಹಿಸಲು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ 2.0 (PMAY.2.0) ಯೋಜನೆ ಅಡಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಸಲ್ಲಿಕೆಯನ್ನು ಕೇಂದ್ರ ಸರಕಾರದ http://pmay.urban.gov.in ವೆಬ್‌ಸೈಟ್‌ನ ಮೂಲಕ ಅರ್ಜಿ ಆಹ್ವಾನಿಸಲಾಗಿರುತ್ತದೆ.
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಜುಲೈ 15 ರೊಳಗಾಗಿ ಅರ್ಜಿ ಸಲ್ಲಿಸಿ ಸದರಿ ಯೋಜನೆಯ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರಸಭೆಯ ಕಚೇರಿಯ ಆಶ್ರಯ ಶಾಖೆಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವAತೆ ದಾಂಡೇಲಿ ನಗರಸಭೆಯ ಪ್ರಕಟಣೆ ತಿಳಿಸಿದೆ.

******************,*

ಹೊನ್ನಾವರ: ವಿದ್ಯುತ್ ವ್ಯತ್ಯಯ

ಕಾರವಾರ; ಹೊನ್ನಾವರ ಉಪವಿಭಾಗದ ಗ್ರಾಮೀಣ ಶಾಖೆಯ ಸಾಲ್ಕೋಡ. ಹಡಿನಬಾಳ, ಕಡ್ಲೆ ಮತ್ತು ಸುಬ್ರಹ್ಮಣ್ಯ ಫೀಡರ್ ವ್ಯಾಪ್ತಿಗಳಲ್ಲಿ 11 ಕೆ.ವಿ ಮಾರ್ಗದ ನಿರ್ವಹಣೆಯ ನಿಮಿತ್ತ ಜೂ.25 ರಂದು ಬೆಳಗ್ಗೆ 10 ಗಂಟೆಯಿAದ ಸಂಜೆ 4 ಗಂಟೆಯವರೆಗೆ ಹಾಗೂ 33 ಕೆ.ವಿ. ವಿದ್ಯುತ್ ವಿತರಣಾ ಉಪ-ಕೇಂದ್ರ, ಗೇರಸೊಪ್ಪದಲ್ಲಿ 33 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣೆಯ ಕೆಲಸದ ನಿಮ್ಮಿತ್ತ ಹೊನ್ನಾವರ ತಾಲೂಕಿನ ಗೇರುಸೊಪ್ಪ ಶಾಖಾ ವ್ಯಾಪ್ತಿಯ ಬಲ, ಎಡ, ಮಾಗೋಡ, ಉಪ್ಪೋಣಿ, ಫೀಡರುಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 11 ಗಂಟೆಯಿAದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸುವಂತೆ ಹೊನ್ನಾವರ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ(ವಿ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

**********************
ಮಹಿಳೆಯರಿಗೆ ಟೈಲರಿಂಗ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ; ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮಹಿಳೆಯರಿಗೆ ಟೈಲರಿಂಗ್ ಕುರಿತ 31 ದಿನಗಳ ಉಚಿತ ತರಬೇತಿಯು ಜುಲೈ 26 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9241482541, 9113880324 ನ್ನು ಸಂಪರ್ಕಿಸುವAತೆ ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

****************

ಇಂದಿನ ಮಳೆ ವಿವರ

ಕಾರವಾರ; ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ, ಅಂಕೋಲಾದಲ್ಲಿ 74.2 ಮಿಮೀ, ಭಟ್ಕಳದಲ್ಲಿ 23.2 ಹಳಿಯಾಳ 6.7 ಹೊನ್ನಾವರ 36.8 ಕಾರವಾರ 59.4 ಕುಮಟಾ 36.1 ಮುಂಡಗೋಡ 14.9 ಸಿದ್ದಾಪುರ 96.4 ಶಿರಸಿ 71.9 ಸೂಪಾ 51.5 ಯಲ್ಲಾಪುರ 22.8 ದಾಂಡೇಲಿಯಲ್ಲಿ 15.5 ಮಿಲಿ ಮೀಟರ್ ಮಳೆ ಸುರಿದಿದೆ.

***************”

Uttar Kannada News Today;

ಜಿಲ್ಲಾ ಪಿ.ಸಿ &ಪಿ.ಎನ್.ಡಿ.ಟಿ ಕಾಯ್ದೆಯ ಜಿಲ್ಲಾ ಸಲಹಾ ಸಮಿತಿ ಸಭೆ

ಕಾರವಾರ; ಜಿಲ್ಲಾ ಶಸ್ತ್ರಚಿಕಿತ್ಸಕ ಮತ್ತು ವೈಧ್ಯಕೀಯ ಅಧೀಕ್ಷಕ ಡಾ. ಶಿವಾನಂದ ಕುಡ್ತರಕರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಿ.ಸಿ &ಪಿ.ಪಿ.ಎನ್.ಡಿ.ಟಿ ಕಾಯ್ದೆಯ ಜಿಲ್ಲಾ ಸಲಹಾ ಸಮಿತಿ ಸಭೆಯು ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನಡೆಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್ ಮಾತನಾಡಿ, ಜಿಲ್ಲೆಯಲ್ಲಿರುವ ಸ್ಕ್ಯಾನಿಂಗ ಸೆಂಟರ್‌ಗಳಲ್ಲಿ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆಯ ಕುರಿತ ಸೂಚನಾ ಫಲಕಗಳನ್ನು ಮತ್ತು ನಿಯಮ ಉಲ್ಲಂಘನೆಯ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲೆಯ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಭೇಟಿ ನೀಡಿ ಪರಿಶೀಲನೆ, ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆಯ ಅನುಷ್ಠಾನ, ಹೊಸ ನೋಂದಣಿ ಮತ್ತು ನವೀಕರಣ ಕುರಿತಂತೆ ಸಲ್ಲಿಕೆಯಾದ ಅರ್ಜಿಗಳನ್ನು ಹಾಗೂ ಬಂದಿರುವ ದೂರು ಅರ್ಜಿಗಳ ಕುರಿತು ಚರ್ಚಿಸಿ, ಸಲಹೆ ಪಡೆದು ಪಿ.ಸಿ.ಪಿ.ಎನ್.ಡಿ.ಟಿ ಸಕ್ಷಮ ಪ್ರಾಧಿಕಾರಿಗಳ ಅನುಮೋದನೆ ಕೋರಿ ಕಡತವನ್ನು ಮಂಡಿಸಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಸಮಿತಿಯ ಸದಸ್ಯರಾದ ಡಾ. ವಿಶ್ವನಾಥ್ ನಾಚಕನೂರು, ಡಾ. ಯುವರಾಜ್ ಪಟವರ್ಧನ್, ಶ್ರೀಕಾಂತ ನಾಯ್ಕ, ರಿತೀಶ್. ಸಿ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

error: Content is protected !!