Ankola Crime News;
ಅಂಕೋಲಾ: ಗೊಬ್ಬರದ ಗುಂಡಿಗೆ ಬಿದ್ದು ಪುಟ್ಟ ಮಗು ದಾರುಣ ಸಾವು ಕಂಡಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಡೊಂಗ್ರಿ ಗ್ರಾಪಂ ವ್ಯಾಪ್ತಿಯ ಹಳವಳ್ಳಿಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ
ಸಾದ್ವಿ ಶ್ರೀಕಾಂತ್ ಹೆಬ್ಬಾರ್ (2.3) ವರ್ಷ ಸಾವನ್ನಪ್ಪಿದ ಮಗುವಾಗಿದ್ದಾಳೆ. ಈಕೆ ಹಳವಳ್ಳಿ ಗ್ರಾಮದ ಮೂಲೆಮನೆಯ ಶ್ರೀಕಾಂತ್ ಹೆಬ್ಬಾರ್ ಮತ್ತು ರೂಪಾ ದಂಪತಿಯ ದ್ವಿತೀಯ ಪುತ್ರಿಯಾಗಿದ್ದಳು.
Ankola Crime News;
ನಿನ್ನೆ ಬೆಳಿಗ್ಗೆ ಎಂದಿನಂತೆ ಸಾದ್ವಿ ಅಪ್ಪನೊಂದಿಗೆ ದನದ ಕೊಟ್ಟಿಗೆ ಬಳಿ ತೆರಳಿದ್ದಾಳೆ, ತಂದೆ ಕೊಟ್ಟಿಗೆಯ ಕೆಲಸದಲ್ಲಿ ಮಗ್ನರಾಗಿದ್ದರು. ಹೀಗಾಗಿ ಮಗಳ ಚಲನವಲನವನ್ನು ಗಮನಿಸಿರಲಿಲ್ಲ,ಕೆಲ ಸಮಯದ ಬಳಿಕ ಮಗಳ ಸದ್ದು ಕೇಳಿಸದೆ ಇದ್ದುದರಿಂದ ಸುತ್ತ ಮುತ್ತ ಹುಡುಕಾಟ ನಡೆಸಿದ್ದಾನೆ.ಕೊನೆಗೆ ಮಗು ಸಾದ್ವಿ ಗೊಬ್ಬರ ಗುಂಡಿಯಲ್ಲಿ ಬಿದ್ದಿರುವುದು ಕಂಡುಬಂದಿದೆ.
ತಕ್ಷಣ ಗುಂಡಿಯಿಂದ ಮಗುವನ್ನು ಮೇಲಕೆತ್ತಿ ತಾಲೂಕಾಸ್ಪತ್ರೆ ಕರೆತಂದಿದ್ದಾರೆ,ವೈದ್ಯರು ಪರೀಕ್ಷಿಸಿದಾಗ ಮಗು ಸಾವನ್ನಪ್ಪಿರುವ ಬಗ್ಗೆ ದೃಢಪಡಿಸಿದ್ದಾರೆ.ಪುಟ್ಟ ಕಂದಮ್ಮನ ಸಾವಿನಿಂದ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.
ಇದನ್ನೂ ಓದಿ ಶಿಗ್ಗಾವಿಯ ಭೀಕರ ಮರ್ಡರ್ ಕೇಸ್ ಹಾಗೂ ಫೈರಿಂಗ್ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಹಾವೇರಿ ಎಸ್ಪಿ..!