Uttar Kannada News Today : ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ..!
ಕಾರವಾರ : ಜೂ.27 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಅಯೋಜಿಸಲಾದ ನಾಡ ಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು, ಕೆಂಪೇಗೌಡ ಅವರ ಭಾವ ಚಿತ್ರಕ್ಕೆ ಪುಷ್ಟ ನಮನ ಸಲ್ಲಿಸುವ ಮೂಲಕ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಲತಾ ನಾಯಕ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ವೆಂ ನಾಯ್ಕ ಸ್ವಾಗತಿಸಿದರು. ಶಿಕ್ಷಕಿ ವನಿತಾ ಶೆಟ್ ನಿರೂಪಿಸಿ, ವಂದಿಸಿದರು.
***************************
ವಾಹನ ಚಾಲಕರು ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ..!
ಕಾರವಾರ: ಪ್ರಸುತ್ತ ಬೇಸಿಗೆಯ ರಜೆಯು, ಕಳೆದು ಶಾಲಾ/ಕಾಲೇಜುಗಳ ಪ್ರಾರಂಭವಾಗಿದ್ದು, ಮಳೆಗಾಲವೂ ಸಹ ಪ್ರಾರಂಭವಾಗಿರುವುದರಿಂದ , ವಾಹನಗಳ ಚಾಲಕರು ಮತ್ತು ಮಾಲೀಕರು ವಾಹನ ಚಲಾಯಿಸುವಾಗ, ರಸ್ತೆ ದಾಟುವ ಮಕ್ಕಳು ಕಂಡು ಬಂದಲ್ಲಿ ನಿಧಾನವಾಗಿ ವಾಹನವನ್ನು ಚಲಾಯಿಸಬೇಕು.
ಮಕ್ಕಳ ಮೈಮೇಲೆ ಕೆಸರು ಹಾರಿಸಬಾರದು, ಚಿಕ್ಕ ಮಕ್ಕಳು ರಸ್ತೆಯಲ್ಲಿ ನಡೆದಾಡುವಾಗ ಅವರಿಗೆ ಟ್ರಾಫಿಕ್ ನಿಯಮಗಳ ಅರಿವಿರುವುದಿಲ್ಲ, ಅವರು ರಸ್ತೆಯ ಮಧ್ಯದಲ್ಲಿ ನಡೆದಾಡಬಹುದು ಅಥವಾ ಆಟವಾಡುತ್ತಾ ರಸ್ತೆ ದಾಟಬಹುದು ಇವುಗಳನ್ನು ಗಮನದಲ್ಲಿಟ್ಟುಕೊಂಡು ಜಾಗೃತೆಯಿಂದ ತಮ್ಮ ವಾಹನಗಳನ್ನು ಚಲಾಯಿಸಬೇಕು.
ಮಕ್ಕಳ ಸುರಕ್ಷತೆಯ ಬಗ್ಗೆ ಜಾಗೃತಿ ವಹಿಸುವುದು ಎಲ್ಲಾ ವಾಹನಗಳ ಚಾಲಕರು ಮತ್ತು ಮಾಲೀಕರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಜಾನ್ ಬಿ ಮಿಸ್ಕಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
**************************
ದಲಿತ ಸಾಹಿತ್ಯ ಅರ್ಧ ಶತಮಾನ – ಅಧ್ಯಯನ ಶಿಬಿರ..!
ಕಾರವಾರ: ಕರ್ನಾಟಕ ಸಾಹಿತ್ಯ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ: ಅರ್ಧಶತಮಾನ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಸೆಪ್ಟೆಂಬರ್ ತಿಂಗಳು ನೆಡೆಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿಯಿರುವ 20 ರಿಂದ 50 ವರ್ಷ ವಯಸ್ಸುಳ್ಳ ಪರಿಶಿಷ್ಟ ಜಾತಿಗೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನವಾಗಿದ್ದು. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿ ವಿವರಗಳಿಗಾಗಿ ಅಕಾಡೆಮಿ ವೆಬ್ಸೈಟ್ https://sahityaacademy.karnataka.gov.in ನಿಂದ ಪಡೆಯಬಹುದಾಗಿದೆ ಎಂದು ಅಕಾಡೆಮಿ ರಿಜಿಸ್ಟಾರ್ ಕರಿಯಪ್ಪ. ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*************************
ಕಾರವಾರದಲ್ಲಿ ಡೆಲಿವರಿ ಸೆಂಟರ್ ಉದ್ಘಾಟನೆ..!
ಕಾರವಾರ : ಕಾರವಾರದ ಹೆಡ್ ಪೋಸ್ಟ್ ಆಫೀಸ್ನಲ್ಲಿ ಹೊಸ ಡೆಲಿವರಿ ಸೆಂಟರ್ಗೆ ಕಾರವಾರ ವಿಭಾಗದ ಅಂಚೆ ಅಧೀಕ್ಷಕ ಧನಂಜಯ ಆಚಾರ್ ರವರು ಹಸಿರು ಬಾವುಟ ತೋರಿಸುವುದರ ಮೂಲಕ ಶುಕ್ರವಾರ ಅಧಿಕೃತವಾಗಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಉಪ ಅಂಚೆ ಅಧೀಕ್ಷಕ ಅಕ್ಷಯ ಕಾಮತ್, ಕಾರವಾರ ಹೆಡ್ ಆಫೀಸ್ ಪೋಸ್ಟ್ ಮಾಸ್ಟರ್ ಶ್ರೀಧರ್ ಕುವಳೆಕರ್ ಹಾಗೂ ಕಾರವಾರ ವಿಭಾಗದ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ರಾಘವೇಂದ್ರ ಆಚಾರ್ಯ ಉಪಸ್ಥಿತರಿದ್ದರು.
ಹೊಸ ಡೆಲಿವರಿ ಸೆಂಟರ್ನ ಮುಖ್ಯ ಉದ್ದೇಶವೆಂದರೆ ಗ್ರಾಹಕರಿಗೆ ವೇಗವಾಗಿ ಹಾಗೂ ಪರಿಣಾಮಕಾರಿಯಾದ ಅಂಚೆ ಸೇವೆಗಳನ್ನು ಒದಗಿಸುವುದು. ಈ ಸೌಲಭ್ಯದಿಂದ ಸ್ಥಳೀಯ ಸಾರ್ವಜನಿಕರಿಗೆ ಪ್ರಮುಖ ಲಾಭಗಳು ಲಭಿಸಲಿವೆ: ಅಂಚೆ ವಿತರಣಾ ವೇಗದಲ್ಲಿ ಹೆಚ್ಚಳ, ಸಮಯಪಾಲನೆ ಉತ್ತಮಗೊಳ್ಳುವುದು, ಗ್ರಾಹಕರಿಗೆ ಅನುಕೂಲಕರ ಮತ್ತು ಸುಲಭ ಸೇವೆಗಳು, ಪಾರ್ಸೆಲ್ ಹಾಗೂ ಸ್ಪೀಡ್ ಪೋಸ್ಟ್ ವಿತರಣೆಯಲ್ಲಿ ದಕ್ಷತೆ.
ಇಂತಹ ಸೌಲಭ್ಯಗಳ ಅಳವಡಿಕೆಯಿಂದ ಕಾರವಾರದ ಅಂಚೆ ಸೇವೆಗಳು ಇನ್ನಷ್ಟು ನವೀಕರಿಸಿ, ಜನತೆಗೆ ಸಮರ್ಪಿತ ಸೇವೆ ನೀಡುವಲ್ಲಿ ಮುಂದಾಗಲಿದೆ ಎಂದು ಕಾರವಾರ ವಿಭಾಗದ ಅಂಚೆ ಅಧೀಕ್ಷಕ ಧನಂಜಯ್ ಆಚಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*************************
ಜಿಮ್ ಉಪಕರಣಗಳನ್ನು ಪಡೆಯುವ ಬಗ್ಗೆ..!
ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ಯುವನೀತಿ ಅನುಷ್ಠಾನ ಅಡಿಯಲ್ಲಿ ಯುವಜನರ ದೈಹಿಕ ಸಾಮರ್ಥ್ಯವನ್ನು ಸದೃಢಗೊಳಿಸಲು ಯುವ ಶಕ್ತಿ ಕೇಂದ್ರ ಯೋಜನೆಯಡಿ ಮೂಲಸೌಕರ್ಯಗಳನ್ನು ಇಲಾಖೆಯ ಕ್ರೀಡಾಂಗಣಗಳು, ಕ್ರೀಡಾ ಶಾಲೆ/ವಸತಿ ನಿಲಯ ಮತ್ತು ಸರ್ಕಾರಿ ಕಾಲೇಜುಗಳು ಮತ್ತು ಪೋಲಿಸ್ ತರಬೇತಿ ಶಾಲೆಗಳಿಗೆ ಅತ್ಯಾಧುನಿಕ ಜಿಮ್ ಉಪಕರಣಗಳನ್ನು ಸರಬರಾಜು ಮಾಡಲು ಉದ್ದೇಶಿಸಲಾಗಿರುತ್ತದೆ.
ಅದರಂತೆ 25*25 ಚದರ ಅಡಿ ಸ್ಥಳಾವಕಾಶವನ್ನು ಹೊಂದಿರುವ ಕ್ರೀಡಾಂಗಣಗಳು, ಕ್ರೀಡಾ ಶಾಲೆ/ವಸತಿ ನಿಲಯ ಮತ್ತು ಸರ್ಕಾರಿ ಕಾಲೇಜುಗಳು ಮತ್ತು ಪೋಲಿಸ್ ತರಬೇತಿ ಶಾಲೆಗಳ ವಿವರವನ್ನು ಜುಲೈ 2 ರೊಳಗಾಗಿ ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆ ಕಾರ್ಯಾಲಯಕ್ಕೆ ಸಲ್ಲಿಸತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ಮೊಬೈಲ್ ಸಂಖ್ಯೆ: 9480886551 ಕ್ಕೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
************************
ಯುವ ಸಂಘಗಳಿಗೆ ಕ್ರೀಡಾ ಸಾಮಗ್ರಿ ವಿತರಣೆ: ಅರ್ಜಿ ಆಹ್ವಾನ..!
ಕಾರವಾರ: ಪ್ರಸುತ್ತ ಸಾಲಿನಲ್ಲಿ ಗ್ರಾಮೀಣ ಯುವಜನತೆಯು ಆರೋಗ್ಯಕರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಸಹಾಯಕವಾಗುವ ವಾತಾವರಣವನ್ನು ಸೃಜಿಸಲು ಯುವ ಚೈತನ್ಯ ಯೋಜನೆಯಡಿ ರಾಜ್ಯದ ಆಯ್ದ ಯುವ ಸಂಘಗಳಿಗೆ ಕ್ರೀಡಾ ಸಾಮಗ್ರಿಗಳನ್ನು ಒದಗಿಸಲಾಗುತ್ತಿದೆ.
ಅದರಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಕ್ರಿಯವಾಗಿರುವ 4 ಯುವ ಸಂಘ (ಗ್ರಾಮೀಣ ಪ್ರದೇಶದ ಶೇ. 70% ರಷ್ಟು ಹಾಗೂ ನಗರ ಪ್ರದೇಶದ ಶೇ.30% ರಷ್ಟು) ಗಳನ್ನು ಸರ್ಕಾರದ ಮಾರ್ಗಸೂಚಿ ಅನ್ವಯ ಆಯ್ಕೆ ಮಾಡಬೇಕಾಗಿರುತ್ತದೆ.
ಕನಿಷ್ಠ 25 ಯುವಜನರನ್ನು ಸದಸ್ಯರನ್ನಾಗಿ ಹೊಂದಿರುವ.
ಎಲ್ಲಾ ಸದಸ್ಯರ ವಯೋಮಿತಿಯು 18 ರಿಂದ 35 ವರ್ಷದೊಳಗಿರುವ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಮಾನ್ಯತೆ ಪಡೆದಿರುವ (ಯುವ ಸಂಘಗಳು ಇಲಾಖೆಯಿಂದ ಮಾನ್ಯತೆ ಪಡೆಯಲು ಸಂಘಗಳ ನೋಂದಣಿ ಕಾಯ್ದೆಯಡಿ ನೋಂದಣಿ ಕಡ್ಡಾಯವಾಗಿರುವುದಿಲ್ಲ) ಕಡ್ಡಾಯವಾಗಿ ಕ್ರೀಯಾಶೀಲವಾಗಿರುವ ಯುವ ಸಂಘಗಳು ಜುಲೈ 17 ರೊಳಗಾಗಿ ಯುವ ಸಬಲೀಕರಣ ಮತ್ತು ಕೀಡಾ ಇಲಾಖೆ ಕಾರ್ಯಾಲಯಕ್ಕೆ ಅರ್ಜಿಯನ್ನು ಸಲ್ಲಿಸತಕ್ಕದ್ದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ಮೊಬೈಲ್ ಸಂಖ್ಯೆ: 9480886551 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
**************************
ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ..!
ಕಾರವಾರ: ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ IISC, IIT ಮತ್ತು NIT ಸಂಸ್ಥೆಗಳು 2024-25 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿರುವಂತೆ Artificial intelligence and Machine Lerning ಮುಂತಾದ ವೃತಿಪರ ತರಬೇತಿಗೆ ಕೋರ್ಸಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡಗಳ 200 ಇಂಜಿನಿಯರಿAಗ್ ಪದವೀಧರರಿಗೆ ರೂ.15,000 ಗಳ ಶಿಷ್ಯವೇತನ ನೀಡುವ ಕುರಿತು ಅರ್ಜಿ ಸಲ್ಲಿಸಲು ಜುಲೈ 4 ಕೊನೆಯ ದಿನವಾಗಿದೆ.
ಸದರಿ ಶಿಷ್ಯವೇತನ, ತರಬೇತಿಗಾಗಿ ಅರ್ಜಿ ಸಲ್ಲಿಸಲು ಇಚ್ಚಿಸುವ ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾ ಇಲಾಖೆ ಮತ್ತು ತಾಲ್ಲೂಕು ಮಟ್ಟದಲ್ಲಿ ಸಹಾಯಕ ನಿರ್ದೇಶಕರು ,ಸಮಾಜ ಕಲ್ಯಾಣ ಇಲಾಖೆ ಮೂಲಕ ಅರ್ಜಿ ನಮೂನೆಯನ್ನು ಒದಗಿಸಲಾಗುವುದು.
ಹಾಗೂ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ ಕ್ರೊಢೀಕರಿಸಿ,ಅಗತ್ಯ ದಾಖಲಾತಿಗಳೊಂದಿಗೆ ಕೇಂದ್ರ ಕಚೇರಿಗೆ ಸಲ್ಲಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382-226575 ನ್ನು ಸಂಪರ್ಕಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*********************
ಮಳೆ ವಿವರ..!
ಕಾರವಾರ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ, ಅಂಕೋಲಾದಲ್ಲಿ 40 ಮಿಮೀ, ಭಟ್ಕಳದಲ್ಲಿ 18, ಹಳಿಯಾಳ 5.1, ಹೊನ್ನಾವರ 27.5, ಕಾರವಾರ 31, ಕುಮಟಾ 37.3, ಮುಂಡಗೋಡ 8.9, ಸಿದ್ದಾಪುರ 69.3, ಶಿರಸಿ 48.3, ಸೂಪಾ 38.2, ಯಲ್ಲಾಪುರ 17.8, ದಾಂಡೇಲಿಯಲ್ಲಿ 8.7, ಮಿಲಿ ಮೀಟರ್ ಮಳೆ ಸುರಿದಿದೆ. 1 ಮನೆ ಸಂಪೂರ್ಣ ಹಾನಿಯಾಗಿದೆ.