Education Department;
ಹಾವೇರಿ; ಬೋಧಕೇತರರ ನೌಕರರು ತಮ್ಮ ಸೇವೆಯನ್ನು ಇಲಾಖೆಗೆ ಸಲ್ಲಿಸುತ್ತಿದ್ದು ಅವರ ಮೂಲಕ ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲಾಗುತ್ತಿದೆ. ಪ್ರತಿಯೊಬ್ಬ ಬೋಧಕೇತರ ನೌಕರನು ಇಲಾಖೆಯ ಎಲ್ಲ ಯೋಜನೆಗಳ ಮಾಹಿತಿ ಮತ್ತು ಕಾನೂನಿನ ನಿಯಮಗಳನ್ನು ಮನದಟ್ಟು ಮಾಡಿಕೊಂಡು ನಿಯಮಾನುಸಾರ ಕಾರ್ಯ ನಿರ್ವಹಿಸಿಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ ಎನ್ ದಂಡಿನ ಹೇಳಿದ್ರು.

ಅವರು ರವಿವಾರ ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಲಿಪಿಕ ನೌಕರರ ವಾಹನ ಚಾಲಕರ ಮತ್ತು ಡಿ ಗ್ರೂಪ್ ನೌಕರರ ಸಂಘ ಹಾವೇರಿ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಮತ್ತು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಬೋಧಕೇತರ ನೌಕರರಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದ ಹಾವೇರಿ ಜಿಲ್ಲಾ ಡಯಟ್ ಪ್ರಾಂಶುಪಾಲ ಝಡ್ ಎಂ ಖಾಜಿ ಸರ್ಕಾರದ ಯೋಜನೆಗಳು ಸಾರ್ವಜನಿಕರನ್ನು ತಲುಪಿಸುವಲ್ಲಿ ಬೋಧಕೇತರ ನೌಕರರದೆ ಪ್ರಮುಖಪಾತ್ರವಾಗಿದ್ದು. ಇಲಾಖೆಯ ಯಶಸ್ಸಿನಲ್ಲಿ ಹೆಚ್ಚಿನ ಪಾತ್ರ ಅವರದೇ ಆಗಿದೆ ಎಂದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಘವೇಂದ್ರ ಬೊಂಗಾಳೆಯವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಘಟಕದ ಪದಾಧಿಕಾರಿಗಳು, ಜಿಲ್ಲೆಯ ವಿವಿಧ ತಾಲೂಕುಗಳ ಪದಾಧಿಕಾರಿಗಳು, ವಿಶೇಷ ಘಟಕದ ಪದಾಧಿಕಾರಿಗಳಿಗೆ ಪದಗ್ರಹಣ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು. ಸಂಘದ ರಾಜ್ಯ ಘಟಕದ ಪದಾಧಿಕಾರಿಗಳು, ಬೆಳಗಾವಿ ವಿಭಾಗದ ವಿವಿಧ ಜಿಲ್ಲೆಗಳ ಅಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರು, ಜಿಲ್ಲೆಯ ವಿವಿಧ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶ ಕರಿಗಾರ,ಹಾವೇರಿಯ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಎಚ್ ಪಾಟೀಲ, ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರಮಾ, ಶಿರಸಿ ಜಿಲ್ಲಾ ಘಟಕದ ಅಧ್ಯಕ್ಷ ನವೀನ್ ಎಸ್ ಆರ್ ಮುಂತಾದವರು ಮಾತನಾಡಿ ಸಂಘಟನೆಯ ಕ್ರಿಯಾಶೀಲತೆಯನ್ನು ಶ್ಲಾಘಿಸಿ ತಮ್ಮ ಬೆಂಬಲ ಸಂಘಟನೆಗೆ ಸದಾ ಇರುವುದಾಗಿ ತಿಳಿಸಿದರು.

ಉಪಸ್ಥಿತರಿದ್ದ ಎಲ್ಲಾ ಅತಿಥಿಗಳನ್ನು ಮತ್ತು ಬೋಧಕೇತರ ವೃಂದದಿಂದ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಯ್ಕೆಯಾಗಿರುವ ವಿವಿಧ ತಾಲೂಕುಗಳ ನಿರ್ದೇಶಕರುಗಳು, ನಿವೃತ್ತ ಬೋಧಕೇತರ ನೌಕರರು, ಜಿಲ್ಲೆಯ ತಾಲೂಕುಗಳ ಪತ್ರಾಂಕಿತ ವ್ಯವಸ್ಥಾಪಕರುಗಳನ್ನು ಸನ್ಮಾನಿಸಲಾಯಿತು. ನೂರಾರು ಸಂಖ್ಯೆಯಲ್ಲಿ ಬೋಧಕೇತರ ನೌಕರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮಧ್ಯಾಹ್ನ ನಡೆದ ಕಾರ್ಯಾಗಾರದಲ್ಲಿ ಶಿಗ್ಗಾಂವ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಬಿ ಅಂಬಿಗೇರ ‘ಸಾರ್ವಜನಿಕರು ನೌಕರರು ಮತ್ತು ಅಧಿಕಾರಿಗಳ ಪರಸ್ಪರ ಸಂಬಂಧಗಳು’ ಎಂಬ ವಿಷಯದ ಮೇಲೆ ಮಾತನಾಡಿ ಸಾರ್ವಜನಿಕರ ಸೇವಾ ಕಾರ್ಯದಲ್ಲಿ ಕರ್ತವ್ಯ ನಿರತ ಅಧಿಕಾರಿಗಳು ಮತ್ತು ನೌಕರರು ಸಾರ್ವಜನಿಕರೊಂದಿಗೆ ನಡೆದುಕೊಳ್ಳಬೇಕಾದ ರೀತಿ ಹಾಗೂ ಅಧಿಕಾರಿ ಮತ್ತು ಸಿಬ್ಬಂದಿಗಳ ನಡುವೆ ಇರಬೇಕಾದ ಸೌಹಾರ್ಧ ಸಂಬಂಧಗಳನ್ನು ಕುರಿತು ಹಲವಾರು ಕಿವಿ ಮಾತನ್ನು ನೌಕರರಿಗೆ ಹೇಳಿದರು.ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಜಯಪ್ರಕಾಶ ಕುಂಬಾರ ಪ್ರಾಸ್ತಾವಿಕ ನುಡಿ ಆಡಿದರು. ಜಿಲ್ಲಾ ಘಟಕದ ಎಸ್ ಎಸ್ ಬಳಿಗೇರಿ ಸ್ವಾಗತಿಸಿದರು. ರಾಣೆಬೆನ್ನೂರ ಘಟಕದ ಅಜ್ಜಪ್ಪ ಪಸಗಿ ವಂದಿಸಿದರು. ಹಾನಗಲ್ಲ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಅಧೀಕ್ಷಕ ಮಹೇಶಕುಮಾರ ಹನಕೆರೆ ಕಾರ್ಯಕ್ರಮ ನಿರೂಪಿಸಿದರು.

error: Content is protected !!