ಲಂಚಕ್ಕಾಗಿ ಕೈಚಾಚಿದ್ದ ಹೊನ್ನಾವರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ..!

ಲಂಚಕ್ಕಾಗಿ ಕೈಚಾಚಿದ್ದ ಹೊನ್ನಾವರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ..!

ಹೊನ್ನಾವರ: ಇಲ್ಲಿನ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಖಾತಾ ಬದಲಾವಣೆಗಾಗಿ ವ್ಯಕ್ತಿ ಓರ್ವರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರು ದಾಳಿ ನಡೆಸಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣ ಪಂಚಾಯತದಲ್ಲಿ ನಡೆದಿದೆ. ಪಟ್ಟಣ ಪಂಚಾಯತ ಅಧಿಕಾರಿ ಪ್ರವೀಣ ಕುಮಾರ ಎಂಬುವವರು ಚಂದ್ರಹಾಸ ಎಂಬುವವರ ಬಳಿ ಜಮೀನಿಗೆ ಸಂಬಂಧಿಸಿ A ಖಾತಾ ಬದಲಾವಣೆಗಾಗಿ ಎರಡು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಆದರೆ ಮೊದಲ ಹಂತವಾಗಿ ಚಂದ್ರಹಾಸ ಅವರು ಇಂದು 60ಸಾವಿರ ನಗದು ಕೊಡುತ್ತಿದ್ದ ವೇಳೆ ಲೋಕಾಯುಕ್ತರು ನಡೆಸಿದ ದಾಳಿಯ ವೇಳೆ ಸಿಕ್ಕಿಬಿದ್ದಿದ್ದಾರೆ. ಕಾರವಾರ ಲೋಕಾಯುಕ್ತ ಎಸ್ಪಿ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ವಿನಾಯಕ ಬಿಲ್ಲವ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ. ಈ ಅಧಿಕಾರಿ ಇದೇ ರೀತಿ ಅನೇಕರಿಂದ ಲಂಚ ಪಡೆಯುತ್ತಿದ್ದ ಆರೋಪ ಕೂಡ ಹಿಂದಿನಿಂದಲ್ಲೂ ಕೇಳಿ ಬಂದಿತ್ತು. ಇದೆ ವಿಚಾರವಾಗಿ ಕೆಲ ದಿನಗಳ ಹಿಂದೆ ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ಈತನಿಗೆ ತರಾಟೆಗೆ ತೆಗೆದುಕೊಂಡಿದ್ದರು.

ಅಂದರ್ ಬಾಹರ್ ದಾಳಿ, ಎಸ್ಕೇಪ್ ವೇಳೆ ನೀರುಪಾಲು ಕೇಸ್: 8 ಜನರ ಪೈಕಿ ಇಬ್ಬರ ರಕ್ಷಣೆ, ಓರ್ವನ ಶವ ಪತ್ತೆ..!

ಅಂದರ್ ಬಾಹರ್ ದಾಳಿ, ಎಸ್ಕೇಪ್ ವೇಳೆ ನೀರುಪಾಲು ಕೇಸ್: 8 ಜನರ ಪೈಕಿ ಇಬ್ಬರ ರಕ್ಷಣೆ, ಓರ್ವನ ಶವ ಪತ್ತೆ..!

 ವಿಜಯಪುರ: ಅಂದರ್ ಬಾಹರ್ ಇಸ್ಪೀಟ್ ಆಡುವಾಗ ಪೊಲೀಸರ ದಾಳಿ ಹಿನ್ನೆಲೆಯಲ್ಲಿ, ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗುವಾಗ ತೆಪ್ಪ ಮುಗುಚಿಬಿದ್ದ ಪರಿಣಾಮ 8 ಜನರು ನೀರುಪಾಲಾಗಿದ್ದರು, ಆ ಎಂಟು ಜನರ ಪೈಕಿ ಇಬ್ಬರು ಪಾರಾಗಿದ್ದಾರೆ. ಓರ್ವನ ಮೃತ ದೇಹ ಪತ್ತೆಯಾಗಿದೆ. ಇದ್ರೊಂದಿಗೆ ಐವರು ನೀರು ಪಾಲಾಗಿದ್ದಾರೆ‌. ಪುಂಡಲಿಕ್ ಮಲ್ಲಪ್ಪ ಯಂಕಂಚಿ (36) ಮೃತದೇಹ ನಿನ್ನೆ ಪತ್ತೆಯಾಗಿದೆ. ದಶರಥ( 58), ಮೈಬೂಬ್ ವಾಲಿಕಾರ(35), ತೈಯುಬ್ ಚೌಧರಿ ( 45), ರಫೀಕ್ ಬಾಂಬೆ (40), ರಫೀಕ ಜಾಲಗಾರ (48) ನೀರು‌ ಪಾಲಾದವರಾಗಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಹ್ಮದ್ ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆಯಿಂದಲೇ ಎಸ್ ಡಿ ಆರ್ ಎಫ್, ಅಗ್ನಿಶಾಮಕ ದಳ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಎಸ್ಪಿ ಡಾ. ವಿಷ್ಣುವರ್ಧನ್ ವರ್ಗ, ನೂತನ ಎಸ್ಪಿ ಯಾರು ಗೊತ್ತಾ..?

ಉತ್ತರ ಕನ್ನಡ ಜಿಲ್ಲೆಯ ಎಸ್ಪಿ ಡಾ. ವಿಷ್ಣುವರ್ಧನ್ ವರ್ಗ, ನೂತನ ಎಸ್ಪಿ ಯಾರು ಗೊತ್ತಾ..?

ಕಾರವಾರ: ಉತ್ತರ ಕನ್ನಡದ ಎಸ್ಪಿ ಡಾ.ವಿಷ್ಣುವರ್ಧನ್ ವರ್ಗವಾಗಿದ್ದಾರೆ. ನೂತನ ಎಸ್ಪಿಯಾಗಿ ನಾರಾಯಣ್ ಎಂ. ಅವರನ್ನು ಸರ್ಕಾರ ನೇಮಕ ಮಾಡಿದೆ‌. ಅಂದಹಾಗೆ, ರಾಜ್ಯದ 25 ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅದ್ರಲ್ಲಿ, ಉತ್ತರಕನ್ನಡ ಎಸ್ಪಿ ಆಗಿದ್ದ ಡಾ. ವಿಷ್ಣುವರ್ಧನ್ ಅವರನ್ನ ಸಹ ವರ್ಗಾವಣೆ ಮಾಡಲಾಗಿದೆ.   ಉತ್ತರಕನ್ನಡ ಹಾಲಿ ಎಸ್ಪಿ ಆಗಿದ್ದ ವಿಷ್ಣುವರ್ಧನ್ ಅವರನ್ನ ಮೈಸೂರಿಗೆ ವರ್ಗಾವಣೆ ಮಾಡಲಾಗಿದ್ದು, ಅವರ ಜಾಗಕ್ಕೆ ನಾರಾಯಣ್ ಎಂ ಅವರನ್ನ ನೇಮಕ ಮಾಡಲಾಗಿದೆ. ಇನ್ನು, ನಾರಾಯಣ್ ಎಂ. ರವರು 2012ರಲ್ಲಿ ಭಟ್ಕಳ ಡಿವೈಎಸ್ಪಿ ಆಗಿ ಕಾರ್ಯ ನಿರ್ವಹಿಸಿದ್ದರು. ಈಗ ಉತ್ತರಕನ್ನಡ ಎಸ್ಪಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಅಂದರ್ ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ: ಇಸ್ಪೀಟು ಆಡುತ್ತಿದ್ದ ಏಳೇಂಟು ಜನ ನೀರು ಪಾಲು..? ಓರ್ವನ ಶವ ಪತ್ತೆ, ಉಳಿದವರು ನಾಪತ್ತೆ..!

ಅಂದರ್ ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ: ಇಸ್ಪೀಟು ಆಡುತ್ತಿದ್ದ ಏಳೇಂಟು ಜನ ನೀರು ಪಾಲು..? ಓರ್ವನ ಶವ ಪತ್ತೆ, ಉಳಿದವರು ನಾಪತ್ತೆ..!

ವಿಜಯಪುರ: ಅಂದರಬಾಹರ್( ಇಸ್ಪೀಟ್) ಆಡುವಾಗ ಪೊಲೀಸರು ದಾಳಿ ನಡೆಸಿದ ಪರಿಣಾಮ, ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗಲು ಯತ್ನಿಸಿದ ಬರೋಬ್ಬರಿ 7 ರಿಂದ 8 ಜನರು ನೀರು ಪಾಲಾಗಿದ್ದಾರೆ ಅನ್ನೋ ಶಂಕೆ ವ್ಯಕ್ತವಾಗಿದೆ. ಪೊಲೀಸರ ದಾಳಿಗೆ ಹೆದರಿ ಎಸ್ಕೇಪ್ ಆಗಲು ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ತೆರಳುತ್ತಿದ್ದಾಗ, ತೆಪ್ಪ ಮುಗುಚಿ ಬಿದ್ದು ಏಳೆಂಟು ಜನರು ನೀರುಪಾಲು ಆಗಿದ್ದಾರೆ ಎನ್ನಲಾಗಿದೆ. ಅದರಲ್ಲಿ ಓರ್ವನ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕೊಲಾರ್ ಮೂಲದ ಪುಂಡಲೀಕ ಯಂಕಂಚಿ(35) ಅಂತಾ ಗುರುತಿಸಲಾಗಿದೆ. ಅದೃಷ್ಟವಶಾತ್ ಓರ್ವ ನದಿಯಿಂದ ಹೊರಗೆ ಬಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ತೆಪ್ಪದಲ್ಲಿ ತೆರಳಿದವರು ಕೊಲ್ಹಾರ ಹಾಗೂ ಬಳೂತಿ ಗ್ರಾಮದವರು ಎನ್ನಲಾಗಿದೆ. ಕೋಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿ ಕೃಷ್ಣಾ ನದಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನೊರ್ಮಾಣವಾಗಿದೆ. ಕೊಲ್ಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಿಗ್ಗಾವಿ ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಯನ್ನೇ ಹಾಕಿ, ಕಾಂಗ್ರೆಸ್ ಗೆ ಹಾವೇರಿ ಮುಸ್ಲಿಂ ಒಕ್ಕೂಟ ಆಗ್ರಹ..!

ಶಿಗ್ಗಾವಿ ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಯನ್ನೇ ಹಾಕಿ, ಕಾಂಗ್ರೆಸ್ ಗೆ ಹಾವೇರಿ ಮುಸ್ಲಿಂ ಒಕ್ಕೂಟ ಆಗ್ರಹ..!

ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಗೆ ಮಸ್ಲಿಂರಿಗೆ ಕಾಂಗ್ರೆಸ್ ಪಕ್ಷವು ಟಿಕೆಟ್ ನೀಡಬೇಕೆಂದು ಹಾವೇರಿ ಜಿಲ್ಲಾ ಮುಸ್ಲಿಂ ಒಕ್ಕೂಟ ಆಗ್ರಹಿಸಿದೆ. ಸೋಮವಾರ ನಗರದಲ್ಲಿ ಜರುಗಿದ ಹಾವೇರಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಜಿಲ್ಲಾ ಮಟ್ಟದ ಸಭೆಯಲ್ಲಿ ಭಾಗವಹಿಸಿದ್ದ ಒಕ್ಕೂಟದ ಪದಾಧಿಕಾರಿಗಳು ಈ ಬಗ್ಗೆ ಒಮ್ಮತದ ನಿರ್ಣಯ ಕೈಗೊಂಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ 90-95% ಮುಸ್ಲಿಂರು ಮತ ಹಾಕುತ್ತಿದ್ದಾರೆ. ಆದ್ರೆ, ಮುಸ್ಲಿಂರಿಗೆ ಪ್ರಮುಖ ಅಧಿಕಾರ ಸಿಗುತ್ತಿಲ್ಲ. ಅಖಂಡ ಧಾರವಾಡ ಜಿಲ್ಲೆಯಲ್ಲಿ ಸ್ಥಾನಿಕವಾಗಿ ಯಾರೊಬ್ಬ ಎಂಪಿ, ಎಂಎಲ್ಎ ಎಂಎಲ್ಸಿ, ನಿಗಮ ಮಂಡಳಿಗಳ ಅಧ್ಯಕ್ಷರು ಇಲ್ಲದ ಕಾರಣ ಬರುವ ಶಿಗ್ಗಾಂವ್ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿ ಸರ್ಕಾರ ಗೆಲ್ಲಿಸಿಕೊಂಡು ಬರಬೇಕು. ಇಲ್ಲದಿದ್ದರೆ ಮುಸ್ಲಿಂ ಸಮಾಜದ ಹೋರಾಟಕ್ಕೆ ಸಿದ್ದವಾಗಭೇಕಾಗುತ್ತದೆ ಎಂದು ಸಭೆಯು ನಿರ್ಣಯಿಸಿತು. ಮುಂದಿನ ದಿನಗಳಲ್ಲಿ ಶಿಗ್ಗಾಂವ್ ಸವಣೂರಲ್ಲಿ ಮುಸ್ಲಿಂ ಒಕ್ಕೂಟದ ಸಭೆಗಳನ್ನು ನಡೆಸಿ ಹೋರಾಟಕ್ಕೆ ಸಿದ್ದರಾಗಿ ಕಾಂಗ್ರೆಸ್ ಹೈಕಮಾಂಡಿಗೆ ಮನವಿ ಸಲ್ಲಿಸಬೇಕೆಂದು ಸಭೆಯು ತಿರ್ಮಾನಿಸಿತು. ಖಬರಸ್ತಾನ, ಮಸಿದಿ, ಮದರಸಾಗಳಿಗೆ...

ಜೋಯಿಡಾದಲ್ಲಿ ಪತ್ರಕರ್ತರ ಕಾರಿನಡಿ ನಾಡಬಾಂಬ್ ಸ್ಪೋಟ, ಕಾರಿಗೆ ಹಾನಿ..!

ಜೋಯಿಡಾದಲ್ಲಿ ಪತ್ರಕರ್ತರ ಕಾರಿನಡಿ ನಾಡಬಾಂಬ್ ಸ್ಪೋಟ, ಕಾರಿಗೆ ಹಾನಿ..!

ಜೊಯಿಡಾ: ಪತ್ರಕರ್ತರು ತೆರಳುತ್ತಿದ್ದ ಕಾರಿನಡಿ ನಾಡ ಬಾಂಬ್ ಸ್ಫೋಟವಾದ ಘಟನೆ ಜೊಯಿಡಾದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಅಂದಹಾಗೆ, ಜೋಯಿಡಾದಲ್ಲಿ ನಡೆಯತ್ತಿದ್ದ ಜನ ಸಂಪರ್ಕ ಸಭೆಗೆ ಗುಂದದಿಂದ ಆಗಮಿಸುತ್ತಿದ್ದ ಪತ್ರಕರ್ತರ ಕಾರಿನಡಿ ನಾಡಬಾಂಬ್ ಬ್ಲಾಸ್ಟ್ ಆಗಿದೆ. ಪರಿಣಾಮ ಕಾರಿನ ಹಿಂಭಾಗಕ್ಕೆ ಹಾನಿಯಾಗಿದೆ. ಅದೃಷ್ಟವಶಾತ್ ಮೂವರು ಪತ್ರಕರ್ತರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ ಅಂತಾ ಮಾಹಿತಿ ಲಭ್ಯವಾಗಿದೆ. ಕಾಡು ಪ್ರಾಣಿಗಳನ್ನು ಬೇಟೆಯಾಡಲು ಬಳಸುವ ನಾಡ ಬಾಂಬ್ ರಸ್ತೆಯಲ್ಲಿ ಬಿದ್ದಿದ್ದು, ಅದರ ಮೇಲೆ ಕಾರಿನ ಟಯ‌ರ್ ಹತ್ತಿ ಸ್ಫೋಟ ಸಂಭವಿಸಿದೆ. ಜೊಯಿಡಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಬಾಡಿಗೆಗೆ ಇಳಿಯುವ ವೈಟ್ ಬೋರ್ಡ್ ಟ್ಯಾಕ್ಸಿಗಳ ವಿರುದ್ಧ ಕ್ರಮ ಕೈಗೊಳ್ಳಿ- ಟ್ಯಾಕ್ಸಿ ಮಾಲೀಕರ ಸಂಘದ ಆಗ್ರಹ..!

ಬಾಡಿಗೆಗೆ ಇಳಿಯುವ ವೈಟ್ ಬೋರ್ಡ್ ಟ್ಯಾಕ್ಸಿಗಳ ವಿರುದ್ಧ ಕ್ರಮ ಕೈಗೊಳ್ಳಿ- ಟ್ಯಾಕ್ಸಿ ಮಾಲೀಕರ ಸಂಘದ ಆಗ್ರಹ..!

ಮುಂಡಗೋಡ: ಖಾಸಗಿ ಮಾಲೀಕತ್ವದ (ವೈಟ್ ಬೋರ್ಡ್) ಟ್ಯಾಕ್ಸಿ ವಾಹನಗಳನ್ನು ಬಾಡಿಗೆ ಆಧಾರದ ಮೇಲೆ ಉಪಯೋಗಿಸುತ್ತಿರುವ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಟ್ಯಾಕ್ಸಿ ಮಾಲೀಕರ ಸಂಘದ ಸದಸ್ಯ ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಮನವಿ ಅರ್ಪಿಸಿದ್ದಾರೆ. ಮುಂಡಗೋಡ ತಾಲೂಕಿನಲ್ಲಿ ಖಾಸಗೀ ಮಾಲೀಕತ್ವದ ಟ್ಯಾಕ್ಸಿ ವಾಹನಗಳನ್ನು ಬೇಕಾಬಿಟ್ಟಿ ದರಗಳಲ್ಲಿ ಬಾಡಿಗೆಗೆ ಬಿಡುತ್ತಿದ್ದಾರೆ. ಇದ್ರಿಂದ ನಮ್ಮ ಬದುಕೇ ಮೂರಾಬಟ್ಟೆಯಾಗ್ತಿದೆ. ನಾವು ಸರ್ಕಾರಕ್ಕೆ ಕಾಲ ಕಾಲಕ್ಕೆ ಟ್ಯಾಕ್ಸ್ ಕಟ್ಟಿ, ಬಾಡಿಗೆಗಾಗಿ ವಾಹನಗಳನ್ನು ಬಿಡುತ್ತಿದ್ದೇವೆ. ಅದ್ರಿಂದ ಬಂದ ಬಾಡಿಗೆಯಲ್ಲೇ ಬದುಕು ನಡೆಸುತ್ತಿದ್ದೇವೆ ಹೀಗಿರುವಾಗ, ಖಾಸಗಿ (ವೈಟ್ ಬೋರ್ಡ್) ಮಾಲೀಕರು ನಮ್ಮ ಉದ್ಯೋಗವನ್ನು ಕಿತ್ತುಕೊಳ್ಳುತ್ತಿದ್ದಾರೆ. ಈ ಕುರಿತು ಸಾಕಷ್ಟು ಬಾರಿ ಅಧಿಕಾರಿಗಳ‌ನಕ್ಕೆ ತಂದರೂ ಕ್ರಮ ಕೈಗೊಂಡಿಲ್ಲ, ಹೀಗಾಗಿ, ತಕ್ಷಣವೇ ಕ್ರಮ ಕೈಗೊಳ್ಳಬೇಕು ಅಂತಾ ಮನವಿಯಲ್ಲಿ ಆಗ್ರಹಿಸಿದ್ದಾರೆ. ಜುಲೈ 3 ರಿಂದ ಅನಿರ್ಧಿಷ್ಟಾವಧಿ ಧರಣಿ..! ಈ ಸಂಬಂಧ ಜುಲೈ 3 ರಿಂದ, ಮುಂಡಗೋಡ ತಹಶಿಲ್ದಾರರ ಕಚೇರಿ ಎದುರು, ಅನಿರ್ಧಿಷ್ಠಾವಧಿ ಧರಣಿ ನಡೆಸಲು ತೀರ್ಮಾನಿಸಿದ್ದಾಗಿ, ಟ್ಯಾಕ್ಸಿ ಮಾಲೀಕರು,...

ನ್ಯಾಸರ್ಗಿ ಗೌಳಿ ದಡ್ಡಿ ಬಳಿ ಬೈಕ್ ಅಪಘಾತ ಹೊಸೂರಿನ ವ್ಯಕ್ತಿ ಸ್ಥಳದಲ್ಲೇ ಸಾವು..!

ನ್ಯಾಸರ್ಗಿ ಗೌಳಿ ದಡ್ಡಿ ಬಳಿ ಬೈಕ್ ಅಪಘಾತ ಹೊಸೂರಿನ ವ್ಯಕ್ತಿ ಸ್ಥಳದಲ್ಲೇ ಸಾವು..!

ಮುಂಡಗೋಡ ತಾಲೂಕಿನ ನ್ಯಾಸರ್ಗಿಯ ಗೌಳಿದಡ್ಡಿ ಬಳಿ ಬೈಕ್ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಮೃತನು ಶಿಗ್ಗಾವಿ ತಾಲೂಕಿನ ಹೊಸುರು ಗ್ರಾಮದವನು ಅಂತಾ ತಿಳಿದು ಬಂದಿದೆ. ಹೊಸೂರಿನ ವೀರಭದ್ರಪ್ಪ ಶೇಖರಯ್ಯ ಹಿರೇಮಠ(48), ಎಂಬುವವರೇ ಮೃತಪಟ್ಟ ಬೈಕ್‌ ಸವಾರನಾಗಿದ್ದಾನೆ. ಈತ ಮುಂಡಗೋಡಿನಿಂದ ನ್ಯಾಸರ್ಗಿ ಮಾರ್ಗವಾಗಿ ಹೊಸೂರಿಗೆ ಬೈಕ್ ಮೂಲಕ ಹೊರಟಿದ್ದ. ಈ ವೇಳೆ ನ್ಯಾಸರ್ಗಿ ಸಮೀಪದ ಗೌಳಿದಡ್ಡಿಯ ರಸ್ತೆ ತಿರುವಿನಲ್ಲಿ ಅಪಘಾತವಾಗಿದೆ ಅನ್ನೊ ಮಾಹಿತಿ ತಿಳಿದುಬಂದಿದೆ. ತಡಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡದಿದೆ.

ಕೊಪ್ಪದ ಕುಟ್ರಿಯವರ ಹುಡುಗ “ಅಭಿ” ಇನ್ನು ನೆನಪು ಮಾತ್ರ..! ಕ್ರೂರ ವಿಧಿಯೇ ಧಿಕ್ಕಾರವಿರಲಿ

ಕೊಪ್ಪದ ಕುಟ್ರಿಯವರ ಹುಡುಗ “ಅಭಿ” ಇನ್ನು ನೆನಪು ಮಾತ್ರ..! ಕ್ರೂರ ವಿಧಿಯೇ ಧಿಕ್ಕಾರವಿರಲಿ

ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದ ಅಭಿಷೇಕ ಬಸವಂತಪ್ಪ ಕುಟ್ರಿ ಮೃತಪಟ್ಟಿದ್ದಾನೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅಭಿಷೇಕಙ್ನು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಅಂದಹಾಗೆ, ಸದಾ ಹಸನ್ಮಖಿಯಾಗಿದ್ದ ಹುಡುಗ ಅಭಿಷೇಕ ಮುಂಡಗೋಡಿನ ಮಹಾರಾಜಾ ಮೊಬೈಲ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಕಳೆದ ಎರಡು ಮೂರು ದಿನಗಳಿಂದ ಕೊಂಚ ಜ್ವರದಿಂದ ಬಳಲುತ್ತಿದ್ದ ಅಭಿಷೇಕ ಗೆ ಹುಬ್ಬಳ್ಳಿ ಕೀಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಎರಡು ದಿನಗಳ ನಂತ್ರ ಇಂದು ರವಿವಾರ ರಾತ್ರಿ ಸಾವನ್ನಪ್ಪಿದ್ದಾನೆ. ಅಭಿಷೇಕ ಕುಟ್ರಿ ಸಾವಿಗೆ, ಪಬ್ಲಿಕ್ ಫಸ್ಟ್ ನ್ಯೂಸ್ ಬಳಗ ಸೇರಿ ಮುಂಡಗೋಡ ತಾಲೂಕಿನ ಹಲವು ಸ್ನೇಹಿತರು ಕಂಬನಿ ಮಿಡಿದಿದ್ದಾರೆ.

ಕಾತೂರು ಸಮೀಪ ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ, ನಾಲ್ವರ ಬಂಧನ, ಮೂವರು ಎಸ್ಕೇಪ್..!?

ಕಾತೂರು ಸಮೀಪ ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ, ನಾಲ್ವರ ಬಂಧನ, ಮೂವರು ಎಸ್ಕೇಪ್..!?

ಮುಂಡಗೋಡ ಪಿಎಸ್ ಐ ಪರಶುರಾಮ್ ಮತ್ತವರ ಟೀಂ ಮಿಂಚಿನ ಕಾರ್ಯಾಚರಣೆ ನಡೆಸಿದೆ. ಕಾತೂರು ಸಮೀಪ ಇಸ್ಪೀಟು ಅಡ್ಡೆಯ ಮೇಲೆ ದಾಳಿ ನಡೆಸಿ ಆಟದಲ್ಲಿ “ಬ್ಯುಸಿ” ಆಗಿದ್ದ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೆ ಮೂವರು ಪರಾರಿಯಾಗಿದ್ದಾರೆ ಅನ್ನೋ ಮಾಹಿತಿ ಪಬ್ಲಿಕ್ ಫಸ್ಟ್ ಗೆ ತಿಳಿದು ಬಂದಿದೆ. ಅಂದಹಾಗೆ, ತಾಲೂಕಿನ ಕಾತೂರು ಸಮೀಪ ಇಸ್ಪೀಟು ಆಟದಲ್ಲಿ ತೊಡಗಿದ್ದರು. ಈ ವೇಳೆ ದಾಳಿ ನಡೆಸಿರೋ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನುಳಿದಂತೆ ಮೂವರು ಆರೋಪಿಗಳು ಎಸ್ಕೇಪ್ ಆಗಿದ್ದಾರೆ‌. ಇನ್ನು ಆಟದಲ್ಲಿ ತೊಡಗಿಸಿದ್ದ 39 ಸಾವಿರ ರೂ. ಹಣವನ್ನೂ ಜಪ್ತಿ ಮಾಡಲಾಗಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ದಾಳಿ ವೇಳೆ ಮುಂಡಗೋಡ ಸಿಪಿಐ ರಂಗನಾಥ್ ನೀಲಮ್ಮನವರ ನೇತೃತ್ವದಲ್ಲಿ, ಪಿಎಸ್ಐ ಪರಶುರಾಮ್, ಪೇದೆಗಳಾದ ಮಂಜು ಚಿಂಚಲಿ, ಕೋಟೇಶ್ ನಾಗರವಳ್ಳಿ, ಅಣ್ಣಪ್ಪ ಬುಡಿಗೇರ್, ಮಹಾಂತೇಶ್ ಮುಧೋಳ್, ಕೆಂಚೆಪ್ಪ, ರವಿ ಭಾಗಿಯಾಗಿದ್ರು ಎನ್ನಲಾಗಿದೆ.

error: Content is protected !!